ವಿಪ ಚುನಾವಣೆ: ವಿಜಯಪುರ- ಬಾಗಲಕೋಟೆ ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಹಾಲಿ, ಮಾಜಿ ಸಚಿವರು, ಶಾಸಕರ ಸಭೆ ನಡೆಸಿದ ಡಿ. ಕೆ. ಶಿವಕುಮಾರ

ವಿಜಯಪುರ: ವಿಧಾನ ಪರಿಷತ ಚುನಾವಣೆಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ವಿಜಯಪುರದಲ್ಲಿ ಸಭೆ ನಡೆಸಿದರು.

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರು, ಹಾಲಿ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು 2018 ರ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಾನಾ ಸಂಘಟನೆಗಳ ಅಧ್ಯಕ್ಷರು ಸೇರಿದಂತೆ ಪ್ರಮುಖರೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉಭಯ ಜಿಲ್ಲೆಗಳ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ವಿಧಾನ ಪರಿಷತ ಸದಸ್ಯ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಅವರನ್ನು ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಸೂಚನೆ ನೀಡಿದರು.

ವಿಜಯಪುರ ನಗರದ ಖಾಸಗಿ ಹೋಟೆಲ್ ವೊಂದರಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಎಂ. ಬಿ. ಪಾಟೀಲ, ಎಚ್. ವೈ. ಮೇಟಿ, ಸಿ. ಎಸ್. ನಾಡಗೌಡ, ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ, ವಿಧಾನ ಪರಿಷತ ಸದಸ್ಯ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ, ಮಾಜಿ ಶಾಸಕರಾದ ಜೆ. ಟಿ. ಪಾಟೀಲ, ಅಜಯಕುಮಾರ ಸರನಾಯಕ, ವಿಠ್ಠಲ ಕಟಕದೊಂಡ, ಕಾಂಗ್ರೆಸ್ ಸೇವಾದಳದ ಮುಖಂಡ ಡಾ. ಗಂಗಾಧರ ಸಂಬಣ್ಣಿ, ಕಾಂಗ್ರೆಸ್ ಮುಖಂಡರಾದ ಸುರೇಶ ಘೋಣಸಗಿ, ಚಂದ್ರಕಾಂತ ಶೆಟ್ಟಿ, ವೈಜನಾಥ ಕರ್ಪೂರಮಠ, ಅಬ್ದುಲ್ ಹಮೀದ ಮುಶ್ರೀಫ್, ಅಶೋಕ ಮನಗೂಳಿ, ಬಿ. ಎಸ್. ಪಾಟೀಲ ಯಾಳಗಿ, ಸಂಗಮೇಶ ಬಬಲೇಶ್ವರ ಸೇರಿದಂತೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕಾಂಗ್ರೆಸ್ ನಾಯಕರು ಮತ್ತು ಮುಖಂಡರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌