ಸುನೀಲಗೌಡ ಪಾಟೀಲ ಗೆಲ್ಲಿಸಲು ಎಸ್. ಆರ್. ಪಾಟೀಲ ಸಂಕಲ್ಪ ಮಾಡಿದ್ದಾರೆ- ಕಾಂಗ್ರೆಸ್ ಗೆಲುವ ಶತಸಿದ್ಧ- ಎಂ ಎಲ್ ಸಿ ಪ್ರಕಾಶ ರಾಠೋಡ

ವಿಜಯಪುರ: ಎಸ್ .ಆರ್. ಪಾಟೀಲರು ರಾಜ್ಯದ ಹಿರಿಯ ನಾಯಕರು, ಅವರಿಗೆ ದೊಡ್ಡಮಟ್ಟದ ಸ್ಥಾನಮಾನವನ್ನು ಪಕ್ಷ ನೀಡಲಿದೆ.  ಸುನೀಲಗೌಡ ಪಾಟೀಲ ಅವರ ಗೆಲುವಿಗೆ ಎಸ್. ಆರ್.  ಪಾಟೀಲ ಸಂಕಲ್ಪ ಮಾಡಿದ್ದಾರೆ,  ಹೀಗಾಗಿ ನಮ್ಮಲ್ಲಿ ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದು ಪ್ರಕಾಶ ರಾಠೋಡ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಗೆಲ್ಲುವುದೇ ಇಲ್ಲ, ಅವರನ್ನು ಕೂಡಲೇ ಕಾಂಗ್ರೆಸ್ಸಿನಿಂದ ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸುವೆ,  ಈ ಚುನಾವಣೆಯಲ್ಲಿ ಸುನೀಲಗೌಡ ಪಾಟೀಲ ಗೆಲುವು ಶತಸಿದ್ಧ ಎಂದು ಹೇಳಿದರು. […]

ಸುನೀಲಗೌಡ ಪಾಟೀಲ ಪರ ಮತ ಯಾಚಿಸಿದ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ

ವಿಜಯಪುರ: ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಮೂಲಕ ವಿಧಾನ ಪರಿಷತ ಸದಸ್ಯ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಸ್ಪಂದಿಸಿದ್ದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಹೇಳಿದ್ದಾರೆ. ಬಸವನ ಬಾಗೇವಾಡಿಯಲ್ಲಿ ವಿಧಾನ ಪರಿಷತ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಪರ ಮತ ಯಾಚಿಸಿದ ಅವರು, ಸುನೀಲಗೌಡ ಪಾಟೀಲ ಅವರು ತಮ್ಮ ಮೂರು ವರ್ಷದ ಅವಧಿಯಲ್ಲಿ ಸದನದಲ್ಲಿ ಧ್ವನಿ ಎತ್ತುವ ಮೂಲಕ ಸ್ಪಂದಿಸಿದ್ದಾರೆ.  ಹೀಗಾಗಿ ಸ್ಥಳೀಯ […]