ಲಿಂಗಾಯಿತ ಪಂಚಮಸಾಲಿ ಸಮಾಜವನ್ನು ಒಡೆಯಲು ಪ್ರಯತ್ನ ನಡೆದಿದೆ-ಕೂಡಲ ಸಂಗಮ ಶ್ರೀ ಅಸಮಾಧಾನ

ವಿಜಯಪುರ: ಲಿಂಗಾಯಿತ ಪಂಚಮಸಾಲಿ ಸಮಾಜವನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೆಲವು ಜನ ಪಂಚಮಸಾಲಿ ನಾಯಕರೇ ಹೋರಾಟ ಒಡೆಯಲು ಪ್ರಯತ್ನ ಮಾಡುತ್ತಿದ್ದಾರೆ.  ಕಿತ್ತೂರು ಚೆನ್ನಮ್ಮ ಕಾಲದಿಂದಲೂ ಪಂಚಮಸಾಲಿ ಸಮುದಾಯವನ್ನು ಒಡೆಯಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ.  ಈಗ ಕಷ್ಟಪಟ್ಟು ಪಾದಯಾತ್ರೆ ಸತ್ಯಾಗ್ರಹ ಮಾಡಿ ಸಮಾಜವನ್ನು ಒಗ್ಗೂಡಿಸಿದ್ದೇವೆ.  ಇದನ್ನು ಒಡೆಯಲು ಕೆಲವೊಂದು ಶಕ್ತಿಗಳು ಪ್ರಯತ್ನ ಮಾಡುತ್ತಿವೆ.  ಯಾರು ಏನೇ ಪ್ರಯತ್ನ […]

ಬಸವ ನಾಡಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಣೆ

ವಿಜಯಪುರ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ 65 ನೇ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.     ವಿಜಯಪುರ ನಗತದಲ್ಲಿರುವ ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಕ್ರೀಡಾಂಗಣ ಆವರಣದಲ್ಲಿರುವ ಡಾ. ಬಿ. ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ಪಿ ಎಚ್ . ಡಿ. ಆನಂದಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಣಾಧಿಕಾರಿ ಗೋವಿಂದ […]

ವಿಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ಕಾರಜೋಳ, ಜಿಗಜಿಣಗಿ ಪ್ರಚಾರ

ವಿಜಯಪುರ: ವಿಧಾನ ಪರಿಷತ ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಪರ ಸಚಿವ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ ಪ್ರಚಾರ ನಡೆಸಿದರು. ವಿಜಯಪುರ ನಗರದ ಸಾಯಿ ವಿಹಾರದಲ್ಲಿ ನಾಗಠಾಣ ವಿಧಾನಸಭೆ ಮತಕ್ಷೇತ್ರದ ಪ್ರಚಾರ ಸಭ ನಡೆಯಿತು.‌ ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಯಾದ ಪಿ. ಎಚ್. ಪೂಜಾರ ಪರ ಸಚಿವರಾದ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಎಸ್. ಕೆ. ಬೆಳ್ಳುಬ್ಬಿ, ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ವಿಧಾನ ಪರಿಷತ ಸದಸ್ಯರಾದ ನಾರಾಯಣಸಾ […]

ಸುನೀಲಗೌಡ ಪಾಟೀಲರನ್ನು ಗೆಲ್ಲಿಸಿ ಡಿ. 14 ರಂದು ವಿಜಯೋತ್ಸವ ಆಚರಿಸೋಣ- ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ: ಸುನೀಲಗೌಡ ಪಾಟೀಲ ಅವರನ್ನು ಗೆಲ್ಲಿಸಿ ಡಿ.14 ರಂದು ವಿಜಯೋತ್ಸವ ಆಚರಿಸೋಣ. ಅವರನ್ನು ಬೇಕಿರುವುದು ನಮ್ಮ ಧರ್ಮ ಎಂದು ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದ್ದಾರೆ. ಇಂಡಿಯಲ್ಲಿ ವಿಧಾನ ಪರಿಷತ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜಕಾರಣ ಬೇರೆ, ಹೃದಯ ಶ್ರೀಮಂತಿಕೆ ಬೇರೆ ಎಂಬುದು ಇಂಡಿ ಭಾಗದ ಜನರು ತೋರಿಸಿ ಕೊಟ್ಟಿದ್ದಾರೆ. ಇಂಡಿ ತಾಲೂಕಿನ 37 ಗ್ರಾ. ಪಂ. ಗಳಲ್ಲಿ 31 ಗ್ರಾ. ಪಂ. ಕಾಂಗ್ರೆಸ್ ಪಕ್ಷದ […]