ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ

ವಿಜಯಪುರ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಜಯಪುರದಲ್ಲಿ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ‌ ಪ್ರೊ. ರಾಜು ಆಲಗೂರ ನಾನಾ ಘಟಕಗಳ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ರಾಜು ಆಲಗೂರ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರು ನೂತನ ಪದಾಧಿಕಾರಿಗಳ ಪಟ್ಟಿಗೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದರು.

ಅಲ್ಲದೇ, ನೂತನ ಪದಾಧಿಕಾರಿಗಳು ಜಿಲ್ಲಾದ್ಯಂತ ಫಕ್ಷ ಸಂಃಟಿಸುವ ಮೂಲಕ ಎಲ್ಲ ಎಂಟು ವಿಧಾನ ಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗುವಂತೆ ಶ್ರಮಿಸಬೇಕು. 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕೆಲಸ ಮಾಡಬೇಕು ಎಂದು ಪ್ರೊ. ರಾಜು ಆಲಗೂರ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸುಭಾಷ ಛಾಯಾಗೋಳ, ಆಜಾದ ಪಟೇಲ, ಎ. .‌ಸುತಾರ, ವಿಜಯ ಘಾಟಗೆ, ಸುರೇಶಗೌಡ ಪಾಟೀಲ, ವಸಂತಗೌಡ ಪಾಟೀಲ, ಶಂಕರಸಿಂಗ್ ಹಜೇರಿ, ಐ. ಇಂಡೀಕರ, ವಿದ್ಯಾರಾಣಿ ತುಂಗಳ ಸೇರಿದಂತೆ ನಾನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌