ಸೇನೆಯಲ್ಲಿಯೂ ನನ್ನ ಅಭಿಮಾನಿಗಳಿದ್ದಾರೆ- ನನಗೆ ಗೃಹ ಖಾತೆ ಕೊಟ್ಟು ನೋಡಿ ಎಂದು ಸಿಎಂ ಗೆ ಹೇಳಿದ್ದೆ- ಶಾಸಕ ಯತ್ನಾಳ

ವಿಜಯಪುರ: ಭಾರತೀಯ ಸೇನೆಯಲ್ಲಿಯೂ ನನ್ನ ಅಭಿಮಾನಿಗಳಿದ್ದಾರೆ.  ನನ್ನ ಭಾಷಣ ಕೇಳುತ್ತಾರೆ.  ಮಾತನಾಡಿದರೆ ನಿಮ್ಮಂತೆ ಗಂಡಸರ ರೀತಿ ಮಾತನಾಡಬೇಕು ಎಂದು ಯೋಧರು ಹೇಳುತ್ತಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ವಿಜಯವಾಣಿ-ದಿಗ್ವಿಜಯ ವಾಹಿನಿ ಆಯೋಜಿಸಿದ್ದ 1971ರ ಭಾರತ ಪಾಕಿಸ್ತಾನ ಯುದ್ಧ ಸುವರ್ಣ ವರ್ಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ನನ್ನ ಭಾಷಣ ಕೇಳಿ ಸೈನಿಕರು ಖುಷಿಯಾಗಿದ್ದಾರೆ.  ಇದು ನನಗೆ ಖುಷಿ ತಂದಿದೆ.  ಮೊನ್ನೆ ಗೃಹ ಖಾತೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಹೆಲ್ಮೆಟ್ ಕಡ್ಡಾಯ- ಎಸ್ಪಿ ಎಚ್. ಡಿ. ಆನಂದ ಕುಮಾರ ಹೇಳಿದ್ದೇನು ಗೊತ್ತಾ?

ವಿಜಯಪುರ: ಸ್ವತಃ ರಸ್ತೆಗಿಳಿದ ವಿಜಯಪುರ ಎಸ್ಪಿ ಬೈಕ್ ಸವಾರರಿಗೆ ಗುಲಾಬಿ ಹೂವು ನೀಡುವ ಮೂಲಕ ವಿನೂತನ ಜಾಗೃತಿಗೆ ಮುಂದಾಗಿದ್ದಾರೆ.   ವಿಜಯಪುರ ನಗರದ ಗಾಂಧಿಚೌಕಿನಲ್ಲಿ ತಸ್ತೆಗಿಳಿದ ಎಸ್ಪಿ ಎಚ್. ಡಿ. ಆನಂದ ಕುಮಾರ, ಬೈಕ್ ಸವಾರರಿಗೆ ಗುಲಾಬಿ ಹೂವು ನೀಡಿ‌ ಕಿವಿಮಾತು ಹೇಳಿ ವಿನೂತನವಾಗಿ ಕಾನೂನು ಪಾಲನೆ ಮಾಡುವಂತೆ ಮನವಿ ಮಾಡಿದರು.   ಇತ್ತೀಚಿನ ವರ್ಷಗಳಲ್ಲಿ ಸಂಭವಿಸುತ್ತಿರುವ ಬೈಕ್ ಅಪಘಾತಗಳಲ್ಲಿ ಬೈಕ್ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದರಲ್ಲಿ ಬಹುತೇಕರಿಗೆ ತಲೆಗೆ ಪೆಟ್ಟಾಗಿ ಹೆಚ್ಚಿನ ತೊಂದರೆ […]

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಧಾನ ಸಮಾರಂಭ

ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು. ವಿಜಯಪುರ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ವಿಜಯಪುರದ ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ 2021ನೇ ವರ್ಚದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಖ್ಯಾತ ಕವಿ ಡಾ. ಅರವಿಂದ ಮಾಲಗತ್ತಿ ಅವರಿಗೆ ಅವರ ಕಾವ್ಯ ಸಾಧನೆಗಾಗಿ ಹಲಸಂಗಿ ಗೆಳೆಯರ ಪ್ರತಿಷ್ಠಾನದ 2021 ನೇ ವರ್ಷದ ಪ್ರಶಸ್ತಿ ನೀಡಿ ಗೌರವಿಸಲಾಯಿತು. […]