ಸುನೀಲಗೌಡ ಪಾಟೀಲ ಗೆಲುವು ಹಿನ್ನೆಲೆ- ಡಿಕೆಶಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಮಾಜಿ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಸುನೀಲಗೌಡ ಪಾಟೀಲ ಭರ್ಜರಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.‌ ಬಿ. ಪಾಟೀಲ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ.‌ ಶಿವಕುಮಾರ ಅವರನ್ನು ಭೇಟಿ ಮಾಡಿದರು. ವಿಜಯಪುರ ಮತ್ತು ಬಾಗಲಕೋಟ ಸ್ಥಳೀಯ ಸಂಸ್ಥೆಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಎಂ ಎಲ್ ಸಿ ಸುನೀಲಗೌಡ ಪಾಟೀಲ‌ ಮೊದಲ‌ ಸುತ್ತಿನಲ್ಲಿಯೇ ಅತೀ ಹೆಚ್ಚು ಪ್ರಥಮ‌ ಪ್ರಾಶಸ್ತ್ಯದ ಮತಗಳನ್ನು ಪಡೆದು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಎಂ […]

ವಿಪ ಫಲಿತಾಂಶ 2023ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಿದೆ- ಕಾರಜೋಳ ಹೇಳಿಕೆಯಂತೆ ಬಿಜೆಪಿಗೆ ಬರಬೇಕಿದ್ದ 5000 ಮತಗಳು ಎಲ್ಲಿ ಹೋಗಿವೆ?- ಸುನೀಲಗೌಡ ಪಾಟೀಲ

ವಿಜಯಪುರ: ವಿಧಾನ ಪರಿಷತ ಚುನಾವಣೆ ಫಲಿತಾಂಶ 2023ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಿದೆ.  2023ರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ತಿಗೆ ಸತತವಾಗಿ ಎರಡನೇ ಬಾರಿಗೆ ಆಯ್ಕೆಯಾದ ಕಾಂಗ್ರೆಸ್ ಎಂ ಎಲ್ ಸಿ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಒಂದೇ ಒಂದು ಹೇಳಿಕೊಳ್ಳುವಂಥ ಕಾಮಗಾರಿ ಕೈಗೊಂಡಿಲ್ಲ.  ನೀರಾವರಿ ಯೋಜನೆ ರೂಪಿಸಿಲ್ಲ.  ಹೊಸದಾಗಿ ಒಂದೂ ಮನೆಗಳನ್ನು ನಿರ್ಮಿಸಿಲ್ಲ.  ಹಳೆಯ ಮನೆಗಳ […]