ಸುನೀಲಗೌಡ ಪಾಟೀಲ ಗೆಲುವು ಹಿನ್ನೆಲೆ- ಡಿಕೆಶಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಮಾಜಿ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಸುನೀಲಗೌಡ ಪಾಟೀಲ ಭರ್ಜರಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.‌ ಬಿ. ಪಾಟೀಲ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ.‌ ಶಿವಕುಮಾರ ಅವರನ್ನು ಭೇಟಿ ಮಾಡಿದರು.

ವಿಜಯಪುರ ಮತ್ತು ಬಾಗಲಕೋಟ ಸ್ಥಳೀಯ ಸಂಸ್ಥೆಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಎಂ ಎಲ್ ಸಿ ಸುನೀಲಗೌಡ ಪಾಟೀಲ‌ ಮೊದಲ‌ ಸುತ್ತಿನಲ್ಲಿಯೇ ಅತೀ ಹೆಚ್ಚು ಪ್ರಥಮ‌ ಪ್ರಾಶಸ್ತ್ಯದ ಮತಗಳನ್ನು ಪಡೆದು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಎಂ ಬಿ ಪಾಟೀಲ ಅವರು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಮತ್ತು ಚಿಂತಕ ಡಾ. ಸಿ. ಎಸ್. ದ್ವಾರಕಾನಾಥ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌