ಶಾಲೆಗೆ ಶಿಕ್ಷಕನಾಗಿ ಬಂದ ಪರಮೇಶ್ವರ- ವಿದ್ಯಾ ದೇಗುಲದ ಕಲಿಕಾ ವಾತಾವರಣವನ್ನೇ ಬದಲಿಸಿದ

ಮಹೇಶ ವಿ. ಶಟಗಾರ ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಹಿಂದುಳಿದ ಮತ್ತು ಗಡಿಗೆ ಹೊಂದಿಕೊಂಡಿರುವ ಲಂಬಾಣಿ ತಾಂಡಾವೊಂದರಲ್ಲಿ ಸರಕಾರಿ ಶಾಲೆಯ ಶಿಕ್ಷಕ ಮಾಡಿರುವ ಕಾರ್ಯ ಈಗ ಮನೆ ಮಾತನಾಗಿದೆ.  ಸರಕಾರಿ ಶಾಲೆಗಳು ಮತ್ತು ಸರಕಾರಿ ಶಾಲೆಗಳ ಶಿಕ್ಷಕರೆಂದರೆ ಟೀಕೆ ಮಾಡುವವರಿಗೆ ಇಂಥವರೂ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದಾರಾ? ಅವರು ಹೀಗೂ ಅಭಿವೃದ್ಧಿ ಮಾಡುತ್ತಾರಾ ಎಂಬುದಕ್ಕೆ ಸಾಕ್ಷಿಯಾಗಿದೆ ದ್ರಾಕ್ಷಿ ನಾಡಿನ ಈ ಶಿಕ್ಷಕನ ಕಾರ್ಯ.  ಲಾಕಡೌನ್ ಸಮಯವನ್ನು ಸದುಪಯೋಗ ಪಡಿಸಿಕೊಂಡು ತಾನು ಕೆಲಸ ಮಾಡುತ್ತಿರುವ ಶಾಲೆಯಲ್ಲಿ ಈ ಶಿಕ್ಷಕ […]

ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಸವಕಳಿ ಪಂಪುಗಳ ಬದಲಾವಣೆ: ಗೋವಿಂದ ಎಂ. ಕಾರಜೋಳ

ಬೆಳಗಾವಿ: ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಸವಕಳಿಗೊಂಡ ಮತ್ತು ಅಸಾಧಾರಣ ದುರಸ್ಥಿಗೆ ಬರುತ್ತಿರುವ ನಿರೀಕ್ಷಿತ ಪಂಪುಗಳನ್ನು ಕ್ರಮೇಣವಾಗಿ ಬದಲಾಯಿಸುವ ಉದ್ದೇಶದಿಂದ ಹೊಸ ಪಂಪುಗಳ ಖರೀದಿಗೆ ಕೃಷ್ಣ ಭಾಗ್ಯ ಜಲ ನಿಗಮದ 2021-22ನೇ ವರ್ಷದ ಕಾರ್ಯಕ್ರಮ ಪಟ್ಟಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ‌ಈ ಎರಡು ಪಂಪುಗಳನ್ನು ಬದಲಾಯಿಸಲು ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ. ಈ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಸಿಂದಗಿ ಶಾಸಕರಾದ ರಮೇಶ ಭೂಸನೂರ ಅವರ ಚುಕ್ಕೆ ಗುರುತಿನ […]

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಕೆ. ಎಸ್. ಈಶ್ವರಪ್ಪ

ಬೆಳಗಾವಿ: ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿನ ರಾಯಣ್ಣ ಮೂರ್ತಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗೆ ನಮಸ್ಕರಿಸಿ, ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಕುರಿಬ ಸಮುದಾಯದ ಮುಖಂಡರು ಸಚಿವ ಕೆ. ಎಸ್. ಈಶ್ವರಪ್ಪ ಜೊತೆಗಿದ್ದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಬೆಳಗಾವಿ ಪ್ರಕರಣಗಳ ಕುರಿತು ಕಾಂಗ್ರೆಸ್ ನಲ್ಲೇ ಎರಡು ಧ್ವನಿ ಇದೆ. ಸದನದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕು ಎಂದು […]