ರೈತರ ಆರ್ಥಿಕ ಶಕ್ತಿ ಹೆಚ್ಚಳಕ್ಕೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ರೈತನ ಆದಾಯ ಹೆಚ್ಚಿಸುವ ಸಲುವಾಗಿ ಹೊಸ ನಿರ್ದೇಶನಾಲಯವನ್ನು ಸ್ಥಾಪಿಸಲಾಗುತ್ತಿದೆ. ಈ ಮೂಲಕ ರೈತರ ಆದಾಯಕ್ಕೆ ಬೇಕಾದ ಸಮಗ್ರ ಕೃಷಿ, ಇತರ ಕೃಷಿ ಚಟುವಟಿಕೆಗಳ ಚಿಂತನೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ವಿಶ್ವ ರೈತ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಮಾವೇಶ, ಕುರುಬೂರು ಶಾಂತಕುಮಾರ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ರೈತಧ್ವನಿ ವಿಶೇಷಾಂಕ ಮತ್ತು ಹಸಿರು ಹೊನ್ನು […]