ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮ ವಾಣಿ ಮಾಸಿಕ ಪತ್ರಿಕೆ ಬಿಡುಗಡೆ

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮ ವಾಣಿ ಮಾಸಿಕ ಪತ್ರಿಕೆ ಬಿಡುಗಡೆ ಸಮಾರಂಭ ವಿಜಯಪುರ ಜಿ. ಪಂ. ಕಾರ್ಯಾಲಯದಲ್ಲಿ ನಡೆಯಿತು.

ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಮಾಸ ಪತ್ರಿಕೆ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ಅಭಿವೃದ್ಧಿಗೊಸ್ಕರ ಜಿ. ಪಂ, ತಾ. ಪಂ, ಹಾಗೂ ಗ್ರಾ, ಪಂ, ಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಗಲಿರುಳು ದುಡಿಯುತ್ತಿದ್ದಾರೆ.  ಅವರು ಕೈಗೊಂಡಿರುವ ಕಾಮಗಾರಿಗಳಲ್ಲಿ ಯಶಸ್ವಿಯಾದ ಪ್ರಮುಖ ಕೆಲ ಕಾಮಗಾರಿಗಳ ಮಾಹಿತಿಯನ್ನು ಒಳಗೊಂಡಿರುವ ಈ ಪತ್ರಿಕೆಯ ಮೂಲಕ ನಮ್ಮ ಇಲಾಖೆ ಇನಷ್ಟು ಜನರಿಗೆ ಹತ್ತಿರವಾಗುವ ಕಾರ್ಯ ಮಾಡಲಾಗುತ್ತಿದೆ.  ಈ ಪತ್ರಿಕೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಸಂಧರ್ಭದಲ್ಲಿ ಜಿ. ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿಗಳಾದ ಸಿ. ಬಿ. ದೇವರಮನಿ. ಯೋಜನಾ ನಿರ್ದೇಶಕ ಎನ್. ವೈ, ಬಸರಿಗಿಡದ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ ಎಚ್, ಡಿ. ಜಿ, ಪಂ. ನ ಪೃಥ್ವಿರಾಜ ಪಾಟೀಲ, ಸುವರ್ಣಾ ಭಜಂತ್ರಿ, ಶಿಲ್ಪಾ ಗುತ್ತೆದಾರ ಮುಂತಾದವರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌