ಬಿಜೆಪಿ ರಾಜ್ಯ ರೈತ ಮೋರ್ಚಾಗೆ ರವಿಕಾಂತ ಬಗಲಿ ನೇಮಕ

ವಿಜಯಪುರ: ವಿಜಯಪುರ ನಗರಸಭೆಯ ಮಾಜಿ ಸದಸ್ಯ, ರವಿಕಾಂತ ಬಗಲಿ ಅವರನ್ನು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅವರನ್ನು ಈಗ ರೈತ ಮೋರ್ಚಾಗೆ ನೇಮಕ ಮಾಡಲಾಗಿದೆ.

ರಾಜ್ಯಸಭೆ ಸದಸ್ಯ ಮತ್ತು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಈ ನೇಮಕ ಮಾಡಿದ್ದಾರೆ.

ಬಿಜೆಪಿಯಲ್ಲಿ ತಮಗೆ ಹೊಸ ಜವಾಬ್ದಾರಿ ನೀಡಿರುವುದಕ್ಕೆ ರವಿಕಾಂತ ಸಿದ್ದಪ್ಪ ಬಗಲಿ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಈರಣ್ಣ ಕಡಾಡಿ ಹಾಗೂ ಬಿಜೆಪಿ ರಾಜ್ಯ ಹಾಗೂ ವಿಜಯಪುರ ಜಿಲ್ಲಾ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

ಹೊಸ ಪೋಸ್ಟ್‌