ಮೇಕೆದಾಟು ವಿಚಾರ: ಸರಣಿ ಟ್ವೀಟ್ ಗಳ ಮೂಲಕ ವಾಗ್ದಾಳಿ ನಡೆಸಿದ ಮಾಜಿ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಮೇಕೆದಾಟು ಪಾದಯಾತ್ರೆ ವಿಚಾರದ ಕುರಿತು ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತು ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿಕೆಗಳ ವಿರುದ್ಧ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ.  ದಿನಪತ್ರಿಕೆಗಳಲ್ಲಿ ಪಾದಯಾತ್ರೆ ಕುರಿತು ಪ್ರಕಟವಾಗಿರುವ ಜಾಹಿರಾತುಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸರಣಿ ಟ್ವೀಟ್ ಮಾಡುವ ಮೂಲಕ ಪಾದಯಾತ್ರೆ ಟೀಕಿಸುತ್ತಿರುವವರಿಗೆ ಪ್ರತ್ಯುತ್ತರ ನೀಡಿದ್ದಾರೆ. ರಾಜ್ಯದ ಹಿತಕ್ಕಾಗಿ ಕಾವೇರಿ-ಮೇಕೆದಾಟು ವಿಚಾರದಲ್ಲಿ ನಡೆದ ಕಾನೂನಾತ್ಮಕ ಹೋರಾಟದಲ್ಲಿ ನನ್ನ ಸ್ವಂತ ಆಸ್ತಿ ರೀತಿಯಲ್ಲಿ ಹಗಲು-ರಾತ್ರಿ ಹೋರಾಡಿದ್ದೇನೆ. ರಾಜ್ಯದ […]

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ವಿರುದ್ಧ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆರೋಪ-ಕ್ಷಮೆ ಕೇಳಿ ಎಂದ ವಿಜುಗೌಡ ಪಾಟೀಲ

ಬಾಗಲಕೋಟೆ/ವಿಜಯಪುರ: ಮೇಕೆದಾಟು ಯೋಜನೆ ಅನುಷ್ಠಾನ ವಿಚಾರ ಕುರಿತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಏನೇನು ಮಾಡಿದೆ ಎನ್ನುವ ದಾಖಲೆ ನೀಡಿದ್ದೇನೆ.  ಇವರ ಪಾದಯಾತ್ರೆ ಬಗ್ಗೆ ಮತ್ತೆ ಪೂರಕ ದಾಖಲಾತಿ ನೀಡುವೆ.  ಮೇಕೆದಾಟು ಯೋಜನೆಯಲ್ಲಿ ಕಾಂಗ್ರೆಸ್ ಸರಕಾರ ಏನೇನು ಮಾಡಿದೆ ಎಂಬುದರ ಕುರಿತು ಇನ್ನೂ ದಾಖಲೆಗಳಿವೆ.  ನನ್ನ ಬಳಿ ಇರುವ ದಾಖಲೆಗಳನ್ನ ಯಾವುದು ಎಂದು ಹೇಳಬೇಕು ಅನಿಸುತ್ತೆ ಅದನ್ನು ಅಂದು ಬಿಡುಗಡೆ […]

ಬಿ ಎಲ್ ಡಿ ಇ ಡೀಮ್ಡ್ ವಿವಿ, ಆಸ್ಪತ್ರೆಯ ವತಿಯಿಂದ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಆರಂಭಕ್ಕೆ ಯೋಜನೆ ರೂಪಿಸಲಾಗುತ್ತಿದೆ- ಉಪಕುಲಪತಿ ಡಾ. ಆರ್. ಎಸ್. ಮುಧೋಳ

ವಿಜಯಪುರ: ವಿಜಯಪುರ ನಗರ ಮತ್ತು ಸುತ್ತಲಿನ ಜಿಲ್ಲೆಗಳ ಕ್ಯಾನ್ಸರ್ ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆ ಒದಗಿಸುವ ದೃಷ್ಟಿಯಿಂದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ  ಬಿ. ಎಂ. ಪಾಟೀ ವೈದ್ಯಕೀಯ ಕಾಲೇಜು, ಆಸ್ಪತ್ರೆಯು ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಿಸುವ ಯೋಜನೆ ರೂಪಿಸುತ್ತಿದೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ.  ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಕ್ಯಾನ್ಸರ್ ಚಿಕಿತ್ಸೆ ಲಭ್ಯವಿಲ್ಲದ ಕಾರಣ ರೋಗಿಗಳು ಬೇರೆ ಜಿಲ್ಲೆ, ರಾಜ್ಯಗಳಿಗೆ ತೆರಳಿ ಚಿಕಿತ್ಸೆ ಪಡೆಯುವಂತಾಗಿದೆ. ಇದು […]

2ಎ ಮೀಸಲಾತಿ ಹೋರಾಟಕ್ಕೆ ವರ್ಷ ತುಂಬುತ್ತಿರುವ ಹಿನ್ನೆಲೆ- ಜ. 14 ರಂದು ಕೂಡಲ ಸಂಗಮದಲ್ಲಿ ಜಾಗರಣೆ ಕಾರ್ಯಕ್ರಮ- ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ

ವಿಜಯಪುರ: ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ಪೂರ್ಣವಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಜ. 14 ರಂದು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಸಂಕ್ರಾಂತಿ ಹಬ್ಬದ ದಿನ ಪಂಚಮಸಾಲಿ ವರ್ಷಾಚರಣೆ ಮತ್ತು ಜಾಗರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರದಲ್ಲಿ […]