ಮೇಕೆದಾಟು ವಿಚಾರ: ಮಾಜಿ ಸಚಿವ ಎಂ. ಬಿ. ಪಾಟೀಲ ನಿವಾಸದ ಬಳಿ ನಾನಾ ದಲಿತ ಸಂಘಟನೆಗಳ ಪ್ರತಿಭಟನೆ

ವಿಜಯಪುರ: ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ನೀರಾವರಿ ಸಚಿವ ಗೋವಿಂದ ಜಾರಜೋಳ ಬಗ್ಗೆ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಾನಾ ದಲಿತ ಪರ ಸಂಘಟನೆಗಳು ವಿಜಯಪುರದಲ್ಲಿ ಎಂ. ಬಿ. ಪಾಟೀಲ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿವೆ.

ಕೈಗೆ ಕಪ್ಪು ಬಟ್ಟಿ ಕಟ್ಟಿಕೊಂಡ ನಾನಾ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ವಿಜಯಪುರ ನಗರದ ಬಂಜಾರ ಕ್ರಾಸ್ ಬಳಿ ವಿಜಯಪುರ- ಸೊಲ್ಲಾಪುರ ರಸ್ತೆ ಬಂದ್ ಮಾಡಿ ಆಕ್ರೋಶ ಹೊರ ಹಾಕಿದರು.

ಸಚಿವ ಗೋವಿಂದ ಕಾರಜೋಳ ಬಗ್ಗೆ ಎಂ. ಬಿ. ಪಾಟೀಲ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹೀಗಾಗಿ
ಎಂ. ಬಿ. ಪಾಟೀಲ ಅವರು ಕೂಡಲೇ ಸಚಿವ ಗೋವಿಂದ ಕಾರಜೋಳ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೇ, ಎಂ. ಬಿ. ಪಾಟೀಲ ವಿರುದ್ದ ಘೋಷಣೆಗಳನ್ನು ಹಾಕಿದ ಪ್ರತಿಭಟನಾಕಾರರು‌ ಬಂಜಾರಾ ಕ್ರಾಸ್ ನಿಂದ ಎಂ. ಬಿ. ಪಾಟೀಲ ಅವರ ನಿವಾಸದ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಅಲ್ಲದೇ, ಎಂ. ಬಿ. ಪಾಟೀಲ ನಿವಾಸದ ಬಳಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪೊಲೀಸರು ಬಿಗೀ ಬಂದೋಬಸ್ತ್ ಕೈಗೊಂಡಿದ್ದರು.

Leave a Reply

ಹೊಸ ಪೋಸ್ಟ್‌