ಸಿಂದಗಿ ತಹಸೀಲ್ದಾರ ಕಚೇರಿಯಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ

ವಿಜಯಪುರ: ಮಹಾಯೋಗಿ ವೇಮನ ಜಯಂತಿಯನ್ನು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಆಚರಿಸಲಾಯಿತು.

ಸಿಂದಗಿ ತಹಸೀಲ್ದಾರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ ಸಂಜೀವಕುಮಾರ ದಾಸರ ವೇಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.  ಬಳಿಕ ಮಾತನಾಡಿದ ಅವರು, ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡ ಮಹಾನ್ ಚೇತನಕ್ಕೆ ವೇಮನ್ ಅವರಿಗೆ ಅನಂತ ನಮನಗಳು ಎಂದು ಹೇಳಿದರು.

ಈ ಸಂದರ್ಭದಲ್ಲಿ ಖಂಡರಾದ ಅನಂತರಡ್ಡಿ ದೇವರಡ್ಡಿ, ರವಿ ಮಂಗಳೂರ, ಸಂಗನಗೌಡ ಪಾಟೀಲ, ಬಸವರಾಜ ಕೋಳೂರ, ರಾಜೇಂದ್ರರಡ್ಡಿ ದೇಸಾಯಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌