ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ. ಬಿ. ಪಾಟೀಲ ನೇಮಕದಿಂದ ಪಕ್ಷಕ್ಕೆ ಆನೆಬಲ‌ ಬಂದಿದೆ- ಸಂಗಮೇಶ ಬಬಲೇಶ್ವರ

ವಿಜಯಪುರ: ಮಾಜಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಕೆಪಿಸಿಸಿ ಸದಸ್ಯ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಂ. ಬಿ. ಪಾಟೀಲ ಅವರನ್ನು ನೇಮಕ ಮಾಡಿರುವ ಹೈಕಮಾಂಡ್ ಗೆ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಪ್ರಭಾವಿ ನಾಯಕರಾಗಿರುವ ಅವರ ನೇಮಕದಿಂದ ಪಕ್ಷಕ್ಕೆ ಆನೆ ಬಲ ಬಂದಿದೆ ಎಂದು ಸಂಗಮೇಶ ಬಬಲೇಶ್ವರ ಸಂತಸ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಎಂ. ಬಿ. ಪಾಟೀಲ ಅವರು ಯಶಸ್ವಿ ನೀರಾವರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ‌ಅವರು ಕೈಗೊಂಡ ನೀರಾವರಿ ಯೋಜನೆಗಳ ಪ್ರತಿಫಲವಾಗಿ ನಮ್ಮ ಭಾಗದ ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಈ ಮಹತ್ವಪೂರ್ಣ ಹುದ್ದೆಯ ನೇಮಕಕ್ಕೆ ಕಾರಣರಾದ ಎರೆಲ್ಲರಿಗೂ ನಾಡಿನ ರೈತರ ಪರವಾಗಿ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ. ಅಲ್ಲದೇ, ಎಂ. ಬಿ. ಪಾಟೀಲ ಅವರಿಗೆ ಜಿಲ್ಲೆಯ ಜನತೆ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.

Leave a Reply

ಹೊಸ ಪೋಸ್ಟ್‌