ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಗೆ ಚಡಚಣ ಬ್ಲಾಕ್ ಕಾಂಗ್ರೆಸ್ ಮುಖಂಡರು, ಸಂಗಮೇಶ ಬಬಲೇಶ್ವರ ಅವರಿಂದ ಅಭಿನಂದನೆ ಸಲ್ಲಿಕೆ

ವಿಜಯಪುರ: ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ.  ಈ ಹಿನ್ನೆಲೆಯಲ್ಲಿ ಸಂತಸದಲ್ಲಿರುವ ಕಾಂಗ್ರೆಸ್ ಮುಖಂಡರು ವಿಜಯಪುರದಲ್ಲಿರುವ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದ್ದಾರೆ.

ಚಡಚಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ಡಿ. ಹಕ್ಕೆ, ಮಾಜಿ ಶಾಸಕ ವಿಠ್ಠಲ ಧೋ. ಕಟಕದೂಂಡ, ನ್ಯಾಯವಾದಿ ಪವಾರ, ಶಬ್ಬೀರ ನದಾಫ್, ಯುನೀಸ್ ಅಲಿ ಮಕಾಂದಾರ, ನಾರಾಯಣ ವಾಘಮೋರೆ, ನಾರಾಯಣ ವಾಘಮೂರೆ, ಪ್ರಕಾಶ ಕಟ್ಟಿಮನಿ, ಬಿರಾದಾರ, ಮಹಾದೇವ ಬನಸೋಡೆ ಮುಂತಾದವರು ಭೇಟಿ ಮಾಡಿ ಸನ್ಮಾನಿಸಿ ಶುಭ ಕೋರಿದರು.

ಕೆಪಿಸಿಸಿ ಸದಸ್ಯ ಮತ್ತು ಸಮಾಜ ಸೇವಕ ಸಂಗಮೇಶ ಬಬಲೇಶ್ವರ ಮಾಜಿ ಸಚಿವ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ ಶುಭ ಕೋರಿದರು.  ಈ ಸಂದರ್ಭದಲ್ಲಿ ದ್ರಾಕ್ಷಿ ಬೆಳೆಗಾರ ಮತ್ತು ರೈತ ಮುಖಂಡ ಅಭಯಕುಮಾರ ನಾಂದ್ರೆಕರ್ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌