11 ಗೋವುಗಳನ್ನು ಅಜೀವ ದತ್ತು ಪಡೆದು ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ 62ನೇ ಹುಟ್ಟುಹಬ್ಬದ ಅಂಗವಾಗಿ ಒಟ್ಟು 11 ಹಸುಗಳನ್ನು ಆಜೀವ ದತ್ತು ಪಡೆಯುವ ಮೂಲಕ ಗೋರಕ್ಷಣೆಗೆ ಮೇಲ್ಪಂಕ್ತಿ ಹಾಕಿದ್ದಾರೆ. 

ಬೆಂಗಳೂರಿನಲ್ಲಿ ರಾಷ್ಟ್ರೋತ್ಥಾನ ಗೋ ಶಾಲೆಯ 11 ಹಸುಗಳನ್ನು ಅವರು ತಮ್ಮ ಜನ್ಮದಿನದ ಅಂಗವಾಗಿ ದತ್ತು ಪಡೆದರು.  ಹುಟ್ಟುಹಬ್ಬದ ಅಂಗವಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಚೆನ್ನಮ್ಮ ಜೊತೆ ಮುಂಜಾನೆ ಹಸು ಮತ್ತು ಕರುವನ್ನು ಪೂಜೆ ನೆರವೇರಿಸಿದರು.

ನಂತರ ಹಸುವನ್ನು ಮನೆಯಲ್ಲಿ ಕರೆದುಕೊಂಡು ಗೋವಿಗೆ ಗ್ರಾಸ ಹಾಕಿದರು.  ಈ ಮೂಲಕ ಗೋವುಗಳ ಸಂತತಿ ರಕ್ಷಣೆಗೆ ಮೇಲ್ಪಂಕ್ತಿ ಹಾಕೊಕೊಟ್ಟರು.  ಗೋವು ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದನ್ನು ಸಾರಿದರು.  ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುಟುಂಬದ ಇತರೆ ಸದಸ್ಯರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌