ಬಸವನ ಬಾಗೇವಾಡಿಯ ಗೊಳಸಂಗಿಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಶಿವಾನಂದ ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಗೊಳಸಂಗಿ ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

 

ಗೊಳಸಂಗಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ಮಂಗಲ ಕಾರ್ಯಾಲಯ, ರೈತ ಭವನ ಹಾಗೂ ಒಕ್ಕಲುತನ ಹುಟ್ಟುವಳಿ ಮಾರಾಟ ಸಮಿತಿಯ ಗೋಡಾವನಗಳನ್ನು ಶಾಸಕರು ಉದ್ಘಾಟಿಸಿದರು.

ಶ್ರೀ ಬಸವೇಶ್ವರ ಮಂಗಲ ಕಾರ್ಯಾಲಯವನ್ನು ಸುವರ್ಣ ಗ್ರಾಮೋದಯ ಯೋಜನೆಯ ಅನುದಾನದ ಅಡಿಯಲ್ಲಿ ರೂ. 1.75 ಕೋ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.  ರೈತ ಭವನವನ್ನು ಎನ್ ಟಿ ಪಿ ಸಿ ಆರ್ ಮತ್ತು ಆರ್. ಅನುದಾನ ಯೋಜನೆಯಡಿಯಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ.  ಒಕ್ಕಲುತನ ಹುಟ್ಟುವಳಿ ಮಾರಾಟ ಸಮಿತಿಯ ಗೋಡಾವಣವನ್ನು ರೂ. 32 ಲಕ್ಷ ವಚ್ಚದಲ್ಲಿ ನಿರ್ಮಿಸಲಾಗಿದೆ.

ಈ ಸಂದರ್ಭದಲ್ಲಿ ಯರನಾಳ ವಿರಕ್ತ ಸಂಸ್ಥಾನ ಮಠಾಧೀಶ ಶ್ರೀ ಗುರುಸಂಗನಬಸವ ಮಹಾಸ್ವಾಮೀಜಿ, ತಿಕೋಟಾ ವಿರಕ್ತಮಠಾಧೀಶ ಶ್ರೀ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಪ್ರಗತಿಪರ ರೈತ ಎಂ. ಆರ್. ಹೆಬ್ಬಾಳ, ಶೇಖರ ದಳವಾಯಿ, ಈರಣ್ಣ ಪಟ್ಟಣಶೆಟ್ಟಿ, ರಮೇಶ ಸೂಳಿಭಾವಿ, ಸಿದ್ದಣ್ಣ ನಾಗಠಾಣ, ಸೇರಿದಂತೆ ನಾನಾ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌