ಸಿಎಂ ಭೇಟಿ ಮಾಡಿ ಬಜೆಟ್ ನಲ್ಲಿ ದ್ರಾಕ್ಷಿ ಮತ್ತು ವೈನ್ ಅಭಿವೃದ್ಧಿ ಮಂಡಳಿಗೆ ಅನುನಾದ ನೀಡುವಂತೆ ಮನವಿ ಮಾಡಿದ ಶಾಸಕ ಯತ್ನಾಳ ನೇತೃತ್ವದ ದ್ರಾಕ್ಷಿ ಬೆಳೆಗಾರ ನಿಯೋಗ

ಬೆಂಗಳೂರು: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ದ್ರಾಕ್ಷಿ ಬೆಳೆಗಾರರ ಸಂಘದ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮುಂಬರುವ ರಾಜ್ಯ ಬಜೆಟ್ ನಲ್ಲಿ ದ್ರಾಕ್ಷಿ ಮತ್ತು ವೈನ್ ಅಭಿವೃದ್ಧಿ ಮಂಡಳಿಗೆ ಅನುದಾನ ನೀಡುವಂತೆ ಮನವಿ ಮಾಡಿತು. ದ್ರಾಕ್ಷಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.  ಅಲ್ಲದೇ, ಸಂಘದ ರಾಜ್ಯಾಧ್ಯಕ್ಷ ಅಭಯಕುಮಾರ ನಾಂದ್ರೆಕರ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಪೂರ್ಣ […]

ಅಕ್ಕಮಹಾದೇವಿ ಮಹಿಳಾ ವಿವಿ ನೂತನ ಕುಲಸಚಿವರಾಗಿ ಎಂ. ಎನ್. ಚೋರಗಸ್ತಿ ಅಧಿಕಾರ ಸ್ವೀಕಾರ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಕೆಎಎಸ್ ಅಧಿಕಾರಿ ಎಂ. ಎನ್ .ಚೋರಗಸ್ತಿ ಅವರು ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಭಾರ ಕುಲಸಚಿವರಾಗಿದ್ದ ಪ್ರೊ. ಕೆ. ರಮೇಶ ಅವರು ಎಂ. ಎನ್. ಚೋರಗಸ್ತಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ, ಉಪಕುಲಸಚಿವ ಡಾ. ಗವಿಸಿದ್ದಪ್ಪ ಆನಂದಹಳ್ಳಿ ಮುಂತಾದವರು ಉಪಸ್ಥಿತರಿದ್ದರು.