ವಿಜಯಪುರ ಜಿ. ಪಂ. ಸಿಇಓ ಗೋವಿಂದ ರೆಡ್ಡಿ, ಇಂಡಿ ಎಸಿ ರಾಹುಲ ಶಿಂಧೆ ವರ್ಗಾವಣೆ- ಎಲ್ಲಿಗೆ ಗೊತ್ತಾ?

ವಿಜಯಪುರ: ರಾಜ್ಯ ಸರಕಾರ ನಾಲ್ಕು ಜನ ಐಎಎಸ್ ಅಧಿಕಾರಿಗಳನ್ನು ವರ್ಗವಾಣೆ ಮಾಡಿ ಆದೇಶ ಹೊರಡಿಸಿದೆ.

ಗೋವಿಂದ ರೆಡ್ಡಿ.

ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರೆಡ್ಡಿ ಅವರನ್ನು ಬೀದರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ರಾಹುಲ ಸಿಂಧೆ.

ಇತ್ತ ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗಾಧಿಕಾರಿಯಾಗಿರುವ ರಾಹುಲ ಶಿಂಧೆ ಅವರನ್ನು ವಿಜಯಪುರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಅದೇ ರೀತಿ ಬೀದರ ಜಿಲ್ಲಾಧಿಕಾರಿಯಾಗಿರುವ ರಾಮಚಂದ್ರನ್ ಆರ್. ಅವರನ್ನು ಬೆಂಗಳೂರಿನ ಪಿಯು ಶಿಕ್ಷಣ ಮಂಡಳಿ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ.

ಸುರೇಶ ಬಿ. ಇಟ್ನಾಳ ಅವರನ್ನು ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Leave a Reply

ಹೊಸ ಪೋಸ್ಟ್‌