ಫೆ. 14 ರಿಂದ ಪ್ರೌಢ ಶಾಲೆ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಫೆ. 14 ರಿಂದ ಪ್ರೌಢ ಶಾಲೆಗಳನ್ನು ಪುನಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ ಶಿಕ್ಷಣ ಮತ್ತು ಗೃಹ ಇಲಾಖೆಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಶುಕ್ರವಾರ ಉನ್ನತ ಮಟ್ಟದ ಸಭೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ಸರಕಾರದ್ದಾಗಿದೆ.  ಶುಕ್ರವಾರ ಸಂಜೆ ಎಲ್ಲ ಸಚಿವರು, ಡಿಸಿ, ಎಸ್‍ಪಿ, ಸಿಇಓಗಳೊಂದಿಗೆ ಸಭೆ ನಡೆಸಲಿದ್ದು, ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಲಾಗುವುದು.  ನಾನು,  ಶಿಕ್ಷಣ ಹಾಗೂ […]

ನೀಟ್ ಪಾಸಾದರೂ ಎಡ್ಮಿಷನ್ ಮಾಡಲಾಗದೇ ಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಬ್ಬರಿಗೆ ಎಂಬಿಬಿಎಸ್ ಕೋರ್ಸ್ ಶುಲ್ಕ ಭರಿಸಿ ನೆರವಾದ ಆಧುನಿಕ ಭಗೀರಥ

ವಿಜಯಪುರ: ಬಸವ ನಾಡಿನಲ್ಲಿ ಜಲಕ್ರಾಂತಿ ಮಾಡಿ ಅನ್ನದಾತರಿಂದ ಆಧುನಿಕ ಭಗೀರಥ ಎಂದೇ ಹೆಸರಾಗಿರುವ ಮಾಜಿ ಸಚಿವ ಎಂ. ಬಿ. ಪಾಟೀಲ ಈಗ ಮತ್ತೋಂದು ಹೃದಯಸ್ಪರ್ಶಿ ಕಲೆಸ ಮಾಡುವ ಮೂಲಕ ಬಡಜನರ ಮನ ಗೆದ್ದಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಪಡೆದಿದ್ದರೂ ಕಡುಬಡವರಾದ ಕಾರಣ ಪ್ರವೇಶ ಪಡೆಯಲು ಶುಲ್ಕ ಭರಿಸಲು ಸಾಧ್ಯವಾಗದೇ ಪರದಾಡುತ್ತಿದ್ದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಮತ್ತು ಮಾಜಿ‌ ಸಚಿವ ಎಂ. ಬಿ. ಫಾಟೀಲ ನೆರವಾಗಿದ್ದಾರೆ. ವಿಜಯಪುರ ಜಿಲ್ಲೆಯ […]

ಬಸವ ನಾಡಿಗೆ ಭೇಟಿ ನೀಡಿ ಐತಿಹಾಸಿಕ ಗೋಳಗುಮ್ಮಟ ವೀಕ್ಷಿಸಿದ ನಿರ್ಮಲಾನಂದನಾಥ ಸ್ವಾಮೀಜಿ- ಭಕ್ತರಿಗೆ ಆಶೀರ್ವಚನ ನೀಡಿದ ಶ್ರೀಗಳು

ವಿಜಯಪುರ: ಶ್ರೀ ಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬಸವ ನಾಡು ವಿಜಯಪುರಕ್ಕೆ ಭೇಟಿ ನೀಡಿದ್ದು, ಐತಿಹಾಸಿಕ ಗೋಳಗುಮ್ಮಟ ವೀಕ್ಷಿಸಿದ್ದಾರೆ. ಬೆಂಗಳೂರಿನಿಂದ ಕಲಬುರಗಿ ಮಾರ್ಗವಾಗಿ ವಿಜಯಪುರಕ್ಕೆ ಆಗಮಿಸಿದ ಅವರು ಬುಧವಾರ ಸಂಜೆ ಐತಿಹಾಸಿಕ ಗೋಳಗುಮ್ಮಟಕ್ಕೆ ಭೇಟಿ ನೀಡಿ ಪ್ರಾಚೀನ ಸ್ಮಾರಕ ವೀಕ್ಷಿಸಿದರು.  ಈ ಸಂದರ್ಭದಲ್ಲಿ ನಾನಾ ಸ್ವಾಮೀಜಿಗಳೂ ಕೂಡ ಉಪಸ್ಥಿತರಿದ್ದರು. ನಂತರ ವಿಜಯಪುರದ ಖ್ಯಾತ ಉದ್ಯಮಿ ಮತ್ತು ಪ್ರತಿಷ್ಠಿತ ಹೊಟೇಲ್ ಮಧುವನ ಇಂಟರನ್ಯಾಶನಲ್ ಮಾಲಿಕ ಬಾಬುಗೌಡ ಬಿರಾದಾರ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, […]