ಬಸವ ನಾಡಿಗೆ ಭೇಟಿ ನೀಡಿ ಐತಿಹಾಸಿಕ ಗೋಳಗುಮ್ಮಟ ವೀಕ್ಷಿಸಿದ ನಿರ್ಮಲಾನಂದನಾಥ ಸ್ವಾಮೀಜಿ- ಭಕ್ತರಿಗೆ ಆಶೀರ್ವಚನ ನೀಡಿದ ಶ್ರೀಗಳು

ವಿಜಯಪುರ: ಶ್ರೀ ಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬಸವ ನಾಡು ವಿಜಯಪುರಕ್ಕೆ ಭೇಟಿ ನೀಡಿದ್ದು, ಐತಿಹಾಸಿಕ ಗೋಳಗುಮ್ಮಟ ವೀಕ್ಷಿಸಿದ್ದಾರೆ.

ಬೆಂಗಳೂರಿನಿಂದ ಕಲಬುರಗಿ ಮಾರ್ಗವಾಗಿ ವಿಜಯಪುರಕ್ಕೆ ಆಗಮಿಸಿದ ಅವರು ಬುಧವಾರ ಸಂಜೆ ಐತಿಹಾಸಿಕ ಗೋಳಗುಮ್ಮಟಕ್ಕೆ ಭೇಟಿ ನೀಡಿ ಪ್ರಾಚೀನ ಸ್ಮಾರಕ ವೀಕ್ಷಿಸಿದರು.  ಈ ಸಂದರ್ಭದಲ್ಲಿ ನಾನಾ ಸ್ವಾಮೀಜಿಗಳೂ ಕೂಡ ಉಪಸ್ಥಿತರಿದ್ದರು.

ನಂತರ ವಿಜಯಪುರದ ಖ್ಯಾತ ಉದ್ಯಮಿ ಮತ್ತು ಪ್ರತಿಷ್ಠಿತ ಹೊಟೇಲ್ ಮಧುವನ ಇಂಟರನ್ಯಾಶನಲ್ ಮಾಲಿಕ ಬಾಬುಗೌಡ ಬಿರಾದಾರ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಬಾಬುಗೌಡ ಬಿರಾದಾರ ಕುಟುಂಬಸ್ಥರಿಗೆ ಆಶೀರ್ವಾದ ಮಾಡಿದರು.  ಅಲ್ಲದೇ, ರಾತ್ರಿ ಅವರ ಮನೆಯಲ್ಲಿಯೇ ವಾಸ್ತವ್ಯ ಮಾಡಿದರು.

ಅಷ್ಟೇ ಅಲ್ಲ, ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಕೂಡ ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಾಗಲಕೋಟೆ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೋಳ್ಳಲು ಶ್ರೀಗಳು ವಿಜಯಪುರಕ್ಕೆ ಆಗಮಿಸಿದ್ದಾರೆ.

Leave a Reply

ಹೊಸ ಪೋಸ್ಟ್‌