ಮೂರು ತಿಂಗಳೊಳಗೆ ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ- ಜಲನಗರ ಸಂತೋಷಿಮಾತಾ ರಸ್ತೆಯಲ್ಲಿ ರೇಲ್ವೆ ಅಂಡರಬ್ರಿಡ್ಜ್ ನಿರ್ಮಿಸಲಾಗುವುದು- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿರುವೆ ಎಂದು ಕೇಂದ್ರ ಮಾಜಿ ಸಚಿವ ಮತ್ತು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.

ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈ ಭಾಗದ ಜನರ ಸಮಸ್ಯೆಗಳ ಅರಿವು ತಮಗಿದೆ.  ಈ ಕಾಮಗಾರಿ ನಡೆಯುತ್ತಿರುವುದರಿಂದ ವಿಜಯಪುರ ನಗರದ ಇಬ್ರಾಹಿಂಪೂರ, ಗಣೇಶ ನಗರ, ಗುರುಪಾದೇಶ್ವರ ನಗರ ಮುಂತಾದ ಬಡಾವಣೆ ನಿವಾಸಿಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ.  ಅಲ್ಲದೇ, ವಿಜಯಪುರದಿಂದ ಈ ಭಾಗದ ಮೂಲಕ ಸಂಚರಿಸಲೂ ಕೂಡ ತೊಂದರೆಯಾಗಿದೆ.  ಈ ಹಿನ್ನೆಲೆಯಲ್ಲಿ ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಮುಖಂಡರಾದ ವಿಜಯ ಜೋಶಿ, ರಾಜೇಂದ್ರ ವಾಲಿ, ಸಂಪತ ಕೊವಳ್ಳಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌