ವಿಜಯಪುರ ಡಿಸಿಯಿಂದ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ

ವಿಜಯಪುರ: ವಿಜಯಪುರ ಜಿಲ್ಲೆಯ ಮದಭಾವಿ, ಭುರಣಾಪೂರ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಪರಿಸಿಲಿಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಹಿರೇಗೌಡರ ಅವರು ಕಾಮಗಾರಿಯ ಪ್ರಗತಿಯ ಕುರಿತು ಮಾಹಿತಿ ನೀಡಿದರು   ವಿಜಯಪುರ ವಿಮಾನ ನಿಲ್ದಾಣವನ್ನು ಎಟಿಆರ್-72 ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. 220 ಕೋ. ಮಂಜೂರಾಗಿದೆ. ಈ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ಕಾಮಗಾರಿ ನಿರ್ವಹಣೆ ಮತ್ತು ಸಲಹೆಗಾರನ್ನಾಗಿ(ಪಿ ಎಮ್ ಸಿ) […]