ಶಾಲೆಗಳು ಪುನಾರಂಭ ಹಿನ್ನೆಲೆ ವಿಜಯಪುರದಲ್ಲಿ ಡಿಸಿ, ಎಸ್ಪಿಯಿಂದ ಪರಿಶೀಲನೆ

ವಿಜಯಪುರ: ವಸ್ತ್ರ ಸಂಹಿತೆ ಹಿನ್ನೆಲೆಯಲ್ಲಿ ಹೈಕೋರ್ಟ್ ಮತ್ತು ಸರಕಾರದ ಆದೇಶದ ಹಿನ್ನೆಲೆಯಲ್ಲಿ ಶಾಲೆಗಳು ಪುನಾರಂಭವಾಗಿವೆ.  ಈ ಹಿನ್ನೆಲೆಯಲ್ಲಿ   ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಎಸ್ಪಿ ಎಚ್. ಡಿ. ಆನಂದ ಕುಮಾರ ನಾಮನಾ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ವಿಜಯಪುರ ನಗರದಲ್ಲಿರುವ ನಾನಾ ಶಾಲೆಗಳಿಗೆ ಡಿಸಿ ಮತ್ತು ಎಸ್ಪಿ ಭೇಟಿ ನೀಡಿದರೆ, ತಾಲೂಕುಗಳಲ್ಲಿ ತಹಸೀಲ್ದಾರರು ಕೆಲವು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ವಿಜಯಪುರ ನಗರದಲ್ಲಿ ಪಿ. ಸುನೀಲ ಕುಮಾರ ಮತ್ತು ಎಚ್. ಡಿ. ಆನಂದ ಕುಮಾರ ಅವರು, ದರ್ಬಾರ ಹೈಸ್ಕೂಲ್, ಪಿಡಿಜೆ ಹೈಸ್ಕೂಲ್. ಸೇಂಟ್ ಜೋಸೆಫ್ ಹೈಸ್ಕೂಲ್ ಗಳಿಗೆ ಭೇಟಿ ನೀಡಿದರು.  ಅಲ್ಲದೇ, ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕರಲ್ಲಿ ಆತ್ಮಸ್ಥೈರ್ಯ ತುಂಬಿದರು.

ರಾಜ್ಯಾದ್ಯಂತ ಕೆಲವು ದಿನಗಳಿಂದ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ವಿವಾದಗಳು ಉಂಟಾದ ಹಿನ್ನೆಲೆಯಲ್ಲಿ ಯಾವುದತೇ ಊಹಾಪೋಹಗಳಿಗೆ ಕಿವಿಗೊಡದಿರಲು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮನವಿ ಮಾಡಿದ ಅವರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಾಲಾ ಮುಖ್ಯಸ್ಥರು ಕೂಡ ಇಂಥ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು ಹಾಗೂ ಶಾಲಾ ಮಕ್ಕಳ ಹಾಜರಾತಿಯಲ್ಲಿ ಯಾವುದೇ ಕೊರತೆಯಾಗದಂತೆ ನಿಗಾ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

Leave a Reply

ಹೊಸ ಪೋಸ್ಟ್‌