ವಿಜಯಪುರ ಜಿಲ್ಲಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಸಂತ ಸೇವಾಲಾಲ ಜಯಂತಿಯನ್ನು ಕೊರೊನಾ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ವಿಜಯಪುರದಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಸಂತ ಸೇವಾಲಾಲ ಭಾವಚಿತ್ರಕ್ಕೆ ಪೂಜೆಯನ್ನು ನೆರವೇರಿಸಿ, ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಮುಖಂಡರಾದ ರಾಜಪಾಲ ಚವ್ಹಾಣ, ಕಾಂತಾ ನಾಯಕ, ಜಿ. ಪಂ, ಮಾಜಿ ಅಧ್ಶಕ್ಷೆ ಸುಜಾತಾ ಸೋಮನಾಥ ಕಳ್ಳಿಮನಿ, ಕೇಸು ಜಿ, ರಾಠೋಡ, ರಾಜು ಜಾಧವ, ಡಿ, ಎಲ್, ಚವ್ಹಾಣ, ತಾ, ಪಂ, ಮಾಜಿ ಅಧ್ಶಕ್ಷ, ಶೇಖರ ನಾಯಕ, ಅಡಿವೆಪ್ಪ ಸಾಲಗಲ, ಭೀಮರಾಯ ಜಿಗಜಿಣಗಿ, ಬಾಬು ರಾಠೋಡ, ಗಿರೀಶ ಕುಲಕರ್ಣಿ, ಶಂಕರ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌