ವಿಜಯಪುರ ನಗರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಅಬ್ದುಲ್ ಹಮೀದ್ ಮುಶ್ರಿಫ್ ಚಾಲನೆ

ವಿಜಯಪುರ: ವಿಜಯಪುರ ನಗರ ಮತಕ್ಷೇತ್ರದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಚಾನೆ ನೀಡಿದ್ದಾರೆ. ವಿಜಯಪುರ ನಗರದ ವಾರ್ಡ್ ಸಂಖ್ಯೆ 14ರಲ್ಲಿ ನಡೆದ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದ ಅವರು, ವಿಜಯಪುರ ನಗರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕು ಎಂದು ಹೇಳಿದರು. ಮಹಿಳೆಯರನ್ನು ಈ ಅಭಿಯಾನದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ.  ಬ್ಲಾಕ್ ಮಟ್ಟದಿಂದ ಹಿಡಿದು ವಿಧಾನಸಭೆ, ವಿಧಆನ ಪರಿಷತ್ ಹಾಗೂ ಸಂಸತ್ ಚುನಾವಣೆಗಳಲ್ಲೂ ಅವರಿಗೆ ಸ್ಥಾನ […]

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಆಶೀರ್ವದಿಸಿದ ಮುಗಳಖೋಡ ಜಿಡಗಾ ಮಠಾಧೀಶರು- ಇವರು ಮಾಡಿದ ಮನವಿ ಏನು ಗೊತ್ತಾ?

ಬೆಂಗಳೂರು: ಮುಗಳಖೋಡ ಜಿಡಗಾ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಮಾಡಿದರು. ಬೆಂಗಳೂರಿನಲ್ಲಿ ವಿಧಾನ ಸಭೆಯಲ್ಲಿ ಸಿಎಂ ಭೇಟಿ ಮಾಡಿದ ಸ್ವಾಮೀಜಿ ಆಶೀರ್ವಾದ ಮಾಡಿದರು. ಇದೇ ಸಂದರ್ಭದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ. ರಾಜೀವ, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಅಜಯಸಿಂಗ್, ಶಾಸಕರಾದ ದೊಡ್ಡಣ್ಣಗೌಡ ಜಿ. ಪಾಟೀಲ, ಸುಭಾಷ […]

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಮಗಕ್ಕೆ ಸುವರ್ಣ ಮಹೋತ್ವಸದ ಸಂಭ್ರಮ- ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ

ವಿಜಯಪುರ: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್‍ಟಿಡಿಸಿ)ಕ್ಕೆ ಈಗ ಸುವರ್ಣ ಮಹೋತ್ಸವ ಸಂಭ್ರಮ.  ಈ ವರ್ಷಾಚರಣೆ ಹಿನ್ನೆಲೆಯಲ್ಲಿ ನಿಗಮದಿಂದ ವತಿಯಿಂದ ವಿಜಯಪುರ ನಗರದಲ್ಲಿರುವ ಮಯೂರ್ ಆದಿಲ್ ಶಾಹಿ ಹೊಟೇಲ್‍ನಲ್ಲಿ ಈ ವರ್ಷದ ಘೋಷ ವಾಕ್ಯ ಅತಿಥಿ ಸತ್ಕಾರ ಕಾರ್ಯಕ್ರಮದಡಿ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಲಾಯಿತು.  ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ, ಜಿ. ಪಂ. ಸಿಇಒ ರಾಹುಲ ಸಿಂಧೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಜಂಟಿಯಾಗಿ ಸಸಿ ನೆಡುವ ಮೂಲಕ ಸ್ವರ್ಣ ಸಂಭ್ರಮದ ಅತಿಥಿ […]