ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಆಶೀರ್ವದಿಸಿದ ಮುಗಳಖೋಡ ಜಿಡಗಾ ಮಠಾಧೀಶರು- ಇವರು ಮಾಡಿದ ಮನವಿ ಏನು ಗೊತ್ತಾ?

ಬೆಂಗಳೂರು: ಮುಗಳಖೋಡ ಜಿಡಗಾ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಮಾಡಿದರು.

ಬೆಂಗಳೂರಿನಲ್ಲಿ ವಿಧಾನ ಸಭೆಯಲ್ಲಿ ಸಿಎಂ ಭೇಟಿ ಮಾಡಿದ ಸ್ವಾಮೀಜಿ ಆಶೀರ್ವಾದ ಮಾಡಿದರು.

ಇದೇ ಸಂದರ್ಭದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ. ರಾಜೀವ, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಅಜಯಸಿಂಗ್, ಶಾಸಕರಾದ ದೊಡ್ಡಣ್ಣಗೌಡ ಜಿ. ಪಾಟೀಲ, ಸುಭಾಷ ಗುತ್ತೆದಾರ, ರಾಜಕುಮಾರ ಪಾಟೀಲ ತೇಲ್ಕೂರ, ಅವಿನಾಶ ಜಾಧವ, ಶರಣು ಸಲಗರ,ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಅವರುಗಳೊಂದಿಗೆ ಶ್ರೀಕ್ಷೇತ್ರ ಜಿಡಗಾ ಶ್ರೀಮಠದಲ್ಲಿ ಕೆರೆ ನಿರ್ಮಾಣ ಮಾಡುವ ಕುರಿತು ಸಿಎಂ ಬೊಮ್ಮಾಯಿ‌ ಅವರಿಗೆ ಶ್ರೀಗಳು ಮನವಿ ಪತ್ರ ಸಲ್ಲಿಸಿದರು.

Leave a Reply

ಹೊಸ ಪೋಸ್ಟ್‌