ರಾಜ್ಯದಲ್ಲಿ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ಖಚಿತ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು ರಾಜ್ಯದಲ್ಲಿ ಬಿಜೆಪಿ(BJP) ಮತ್ತೋಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಮುಖ್ಯನಂತ್ರಿ (CM)ಬಸವರಾಜ ಬೊಮ್ಮಾಯಿ(Basavaraj Bommayi) ವಿಶ್ಚಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ(Bengaluru) ಬಿಜೆಪಿ ರಾಜ್ಯಾಧ್ಯಕ್ಷ(State President) ಮತ್ತು ಸಂಸದ ನಳಿನ್‍ಕುಮಾರ(Nalin Kumar Kateel) ಕಟೀಲ ಮತ್ತು ತಮ್ಮ ಸಮ್ಮುಖದಲ್ಲಿ ರಾಮನಗರ(Ramanagar) ಜಿಲ್ಲೆ ಮತ್ತು ಬೆಳಗಾವಿ(Belagavi) ಜಿಲ್ಲೆಯ ಖಾನಾಪುರದ(Khanapur) ಪ್ರಮುಖ ಮುಖಂಡರು ಬಿಜೆಪಿಗೆ ಸೇರ್ಪಡೆ(Join) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆ ಕಾರ್ಯ ಆರಂಭಗೊಂಡಿದೆ. ಪಕ್ಷದ ಬದ್ಧತೆಯ ಕಾರ್ಯಕರ್ತರು ಮತ್ತು ಮುಖಂಡರ ನೆರವಿನಿಂದ ಬಿಜೆಪಿ, 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಪಡೆಯಲಿದೆ. ಉತ್ತರದ ಖಾನಾಪುರ ಮತ್ತು ದಕ್ಷಿಣದ ರಾಮನಗರದಲ್ಲಿ ಜನತೆಯೂ ಬಿಜೆಪಿ ಅಧಿಕಾರ ಪಡೆಯಲು ನೆರವಾಗಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಆಳವಾಗಿ ಬೇರೂರಿ ಶಕ್ತಿ ಪಡೆದಿರದ ಪ್ರದೇಶಗಳಲ್ಲಿ ಪಕ್ಷವು ಇನ್ನಷ್ಟು ಶಕ್ತಿಶಾಲಿಯಾಗಿ ಬೆಳೆಯಲಿದೆ. ರಾಜ್ಯದ ರಾಜಕೀಯದಲ್ಲಿ ಅತ್ಯಂತ ಮಹತ್ವದ ದಿನ. ರಾಜಕಾರಣ ನಿಂತ ನೀರಲ್ಲ ಎಂಬ ಮಾತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನೆಲೆಯಾಗಿದ್ದ ಜಿಲ್ಲೆಗಳಲ್ಲಿ ಇಂದು ದೊಡ್ಡ ಬದಲಾವಣೆ ಆಗುತ್ತಿದೆ. ಮುಂಬರುವ ದಿನಗಳಲ್ಲಿ ಎಲ್ಲ ಕಡೆ ಬಿಜೆಪಿಯ ಕಮಲ ಅರಳಲಿದೆ ಎಂದು ಸಿಎಂ ತಿಳಿಸಿದರು.

ಬಿಜೆಪಿ ಪರವಾದ ಈ ಅಲೆಯು ದೊಡ್ಡ ಶಕ್ತಿಯಾಗಿ ಪರಿವರ್ತನೆಗೊಳ್ಳಲಿದೆ. ಇದೊಂದು ಹೊಸ ದಿಕ್ಸೂಚಿ. ಈಗ ಪಕ್ಷ ಸೇರಿದ ಅರವಿಂದ ಪಾಟೀಲ, ಲಿಂಗೇಶ್‍ಕುಮಾರ್ ಮತ್ತಿತರರು ತಂತಮ್ಮ ಕ್ಷೇತ್ರಗಳಲ್ಲಿ ಅತ್ಯಂತ ಪ್ರಭಾವಿಗಳು. ಹೀಗಾಗಿ ಪಕ್ಷ ಹೆಚ್ಚು ಬಲಯುತವಾಗಿ ಬೆಳೆಯಲಿದೆ. ಬಿಜೆಪಿ ಸಕಾರಾತ್ಮಕ ರಾಜಕೀಯ ಮಾಡುತ್ತದೆ. ಆಡಳಿತಕ್ಕೆ ಬಂದ ಬಳಿಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಜನರಿಗಾಗಿ ಮೈಮುರಿದು ದುಡಿಯುತ್ತಿದ್ದೇವೆ. ನಳಿನಕುಮಾರ ಕಟೀಲ ಅವರ ನೇತೃತ್ವದಲ್ಲಿ ಪಕ್ಷವು ರಾಜ್ಯಾದ್ಯಂತ ದೃಢವಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ವಸವರಾಜ ಬೊಮ್ನಾಯಿ ಹೇಳಿದರು.

ಬೆಳಗಾವಿ ಜಿಲ್ಲೆಯ ಖಾನಾಪುರದ ಮಾಜಿ ಶಾಸಕ ಅರವಿಂದ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಹಾಗೂ ಅವರ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾದರು. ರಾಮನಗರ ಜಿಲ್ಲೆಯ ಮುಖಂಡರು ಹಾಗೂ ಬಮುಲ್ ಮಾಜಿ ನಿರ್ದೇಶಕ ಲಿಂಗೇಶ ಕುಮಾರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಚ್. ಎನ್. ಅಣ್ಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಮರಿಲಿಂಗೇಗೌಡರಲ ಅವರ ಮಕ್ಕಳಾದ ಗೌತಮ, ಡಾ. ವಿವೇಕಾನಂದ, ಗ್ರಾಮ ಪಂಚಾಯಿತ್ಲಿ ಮಾಜಿ ಉಪಾಧ್ಯಕ್ಷ ಪ್ರಸಾದಗೌಡ(ಮಾಗಡಿ), ನಗರಸಭಾ ಮಾಜಿ ಸದಸ್ಯ ಕೃಷ್ಣೇಗೌಡ, ಗೋಪಾಲಕೃಷ್ಣ ಹಲವು ಮುಖಂಡರು ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ, ಶಶಿಲ ಜಿ. ನಮೋಶಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಸಿದ್ದರಾಜು, ಮುಖಂಡರು ಮತ್ತು ಕಾರ್ಯಕರ್ತರು ಈ ಸೇರ್ಪಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌