ದ್ರಾಕ್ಷಿ ನಾಡು ತಿಕೋಟಾ ತಾಲೂಕು, ವಿಜಯಪುರ ನಗರದ ನಾನಾ ಕಡೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ವಿಜಯಪುರ ಜಿಲ್ಲೆಯ ದ್ರಾಕ್ಷಿ ನಾಡು ತಿಕೋಟಾ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು. 

 

ತಿಕೋಟಾ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದ ಅವರು, ಕಂದಾಯ ಇಲಾಖೆಯ ಸಂಬಂಧಪಟ್ಟ ನಾನಾ ಕೆಲಸ ಕಾರ್ಯಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದರು.  ತಿಕೋಟಾದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧ ಕಾಮಗಾರಿಯನ್ನು ವೀಕ್ಷಿ,ಸಿದರು.

ಕನಮಡಿ ಗ್ರಾಮದಲ್ಲಿ 2016-17 ನೇ ಆರ್ಥಿಕ ವರ್ಷದಲ್ಲಿ ಎಸ್ಟಿ ಸಮುದಾಯದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ನಂತರ ಕನಮಡಿ ಗ್ರಾಮದ ಗ್ರಾಮ್ ಒನ್ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ

ಸಂಜೆ ವಿಜಯಪುರ ನಗರದಲ್ಲಿರುವ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೂ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಅಲ್ಲಿ ಫಲಾನುಭವಿಗಳಿಗೆ ಮಂಜೂರಾಗಿರುವ ಸರಕಾರಿ ಯೋಜನೆಗಳ ಕಡತಗಳನ್ನು ಪರಿಶೀಲಿಸಿದರು.

Leave a Reply

ಹೊಸ ಪೋಸ್ಟ್‌