ಉನ್ನತ ಶಿಕ್ಷಣ ಬೋಧನೆ, ಸಂಶೋಧನೆಯಲ್ಲಿ ಬಹುಶಿಸ್ತೀಯ ವಿಧಾನಗಳ ಅಳವಡಿಕೆ ಅಗತ್ಯ- ಪ್ರೊ. ಕುಶಾಲ ಕೆ. ದಾಸ

ವಿಜಯಪುರ: ಉನ್ನತ ಶಿಕ್ಷಣದ ಬೋಧನೆ(Higher Education) ಮತ್ತು ಸಂಶೋಧನೆಯಲ್ಲಿ ಬಹುಶಿಸ್ತೀಯ(Multiple Discipline) ವಿಧಾನಗಳನ್ನು(Techniques) ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾನಿಲಯದ(BLDEA Deemed Tobe University) ಯುನೆಸ್ಕೋ ಚೇರ್‍ನ (UNESCO Chair) ಜೀವ ವಿಜ್ಞಾನ(Bio Diversity) ವಿಭಾಗದ ಮುಖ್ಯಸ್ಥ ಪ್ರೊ.ಕುಶಾಲ ಕೆ. ದಾಸ್ ಹೇಳಿದ್ದಾರೆ. 

ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ ಮತ್ತು ಶ್ರೀ.ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಸಂಘಟಿತ ವಿಧಾನಗಳನ್ನು ಎಲ್ಲಾ ಹಂತಗಳಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ನೋಬೆಲ್ ಪ್ರಶಸ್ತಿ ಪುರಷ್ಕøತ ವಿಜ್ಞಾನಿ ಡಾ. ಸಿ. ವಿ. ರಾಮನ್ ಅವರ ಜೀವನ ಸಾಧನೆಯನ್ನು ವಿವರಿಸಿದ ಡಾ. ಕುಶಾಲ ದಾಸ ಅವರು, ಅತ್ಯಂತ ಕಠಿಣ ಪರಿಶ್ರಮ ಮತ್ತು ಅಪಾರ ಬುದ್ಧಮತ್ತೆಯಿಂದ ರಾಮನ್ ಎಫೆಕ್ಟ್ ಕಂಡು ಹಿಡಿಯುವ ಮೂಲಕ ಭಾರತದ ಶ್ರೇಷ್ಠ ಸಂಶೋಧನಾ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಶ್ರೇಯಸ್ಸು ಸಿ. ವಿ. ರಾಮನ ಅವರದಾಗಿದೆ ಎಂದು ಅವರು ಹೇಳಿದರು.

ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಂ. ಎನ್. ಚೋರಗಸ್ತಿ ಮಾತನಾಡಿ, ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಮಹತ್ವವನ್ನು ವಿವರಿಸಿ ವಿದ್ಯಾರ್ಥಿನಿಯರು ಬಹುಶಿಸ್ತೀಯ ನೆಲೆಯಲ್ಲಿ ಸಂಶೋಧನೆ ಕೈಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲಾ ಮಾತನಾಡಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ ಮಾತನಾಡಿ, ಸುಸ್ಥಿರ ಭವಿಷ್ಯ ಸಾಕಾರಗೊಳ್ಳಬೇಕಾದರೆ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಮತ್ತು ಸಂಘಟಿತ ನೆಲೆಯಲ್ಲಿ ಸಂಯೋಜಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಪ್ರೊ.ಅಜೀಜ್ ಮಕಾನದಾರ್, ನಾನಾ ವಿಭಾಗಗಳ ಅಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು.

ಶ್ರೀ.ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಂಯೋಜಕ ಪ್ರೊ. ಜಿ. ಜಿ. ರಜಪೂತ ಸ್ವಾಗತಿಸಿದರು.  ಡಾ. ಬಾಬು ಲಮಾಣಿ ಪರಿಚಯಿಸಿದರು.   ಡಾ. ಶ್ವೇತಾ ವಂದಿಸಿದರು.  ಡಾ. ರೋಹಿಣಿ ಭೂಸನೂರಮಠ ಕಾರ್ಯಕ್ರಮ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌