ರಾಜ್ಯದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನ ಮಂತ್ರಿಗಳು(Prime Minister) ಎಲ್ಲರಿಗೂ ಒಂದೊಂದು ಟಾಸ್ಕ್(Task) ನೀಡಿದ್ದು ರಾಜ್ಯಗಳಲ್ಲಿ 75 ಕೆರೆಕಟ್ಟೆಗಳನ್ನು(Tanks) ಅಭಿವೃದ್ಧಿಗೊಳಿಸಲು(Development) ಸೂಚನೆ ನೀಡಿದ್ದಾರೆ. ಕೋಲಾರದಲ್ಲಿ(Kolar) ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ

ಬಿಜೆಪಿ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಆರ್ಥಿಕ ಇಲಾಖೆಯ ಅನುಮೋದನೆ ಆಗಬೇಕು ಎಂಬ ವಿಷಯವನ್ನು ಸಚಿವರ ಗಮನಕ್ಕೆ ತರಲಾಯಿತು. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಪ್ರಕ್ರಿಯೆ ಅಂತಿಮ ಘಟ್ಟದಲ್ಲಿದೆ ಎಂದು ಅವರು ತಿಳಿಸಿದರು.

ಇಂಧನ ಕ್ಷೇತ್ರದಲ್ಲಿ ಹಸಿರು ಕಾರಿಡಾರಿನಲ್ಲಿ ಮೂರು ಯೋಜನೆಗಳನ್ನು ಸೇರ್ಪಡೆ ಮಾಡಬೇಕಿರುವ ವಿಷಯವೂ ಆರ್ಥಿಕ ಇಲಾಖೆಯ ಅನುಮೋದನೆಗೆ ಬರಲಿದೆ. ಅದನ್ನೂ ಮುಂಚಿತವಾಗಿ ಸಚಿವರ ಗಮನಕ್ಕೆ ತರಲಾಗಿದೆ. ಆದಷ್ಟೂ ಬೇಗನೆ ಇವುಗಳಿಗೆ ಅನುಮೋದನೆ ನೀಡುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಸಿಎಂ ಹೇಳಿದರು.

ರಾಯಚೂರಿನಲ್ಲಿ ಸಿರಿಧಾನ್ಯ ಬೆಳೆಗಾರರ ಸಭೆ

ಜಿ ಎಸ್ ಟಿ ಜಿ ಒ ಎಂ ಸಭೆಯ ಬಗ್ಗೆಯೂ ಚರ್ಚಿಸಲಾಯಿತು. ಸಚಿವರು ಕರ್ನಾಟಕಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.‌‌‌ ಕೇಂದ್ರ ಸರಕಾರದ ಯೋಜನೆಗಳಿಗೆ ಬ್ಯಾಂಕುಗಳ ಮೂಲಕ ಆಗಬೇಕಿರುವ ಕೆಲಸಗಳ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದರು. ಅಂತಾರಾಷ್ಟ್ರೀಯ ಸಿರಿಧಾನ್ಯ ದಿನಾಚರಣೆ ಇರುವುದರಿಂದ ರಾಯಚೂರಿನಲ್ಲಿ ಸಿರಿಧಾನ್ಯ ಬೆಳೆಗಾರರ ಸಭೆಯನ್ನು ಆಯೋಜಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿ ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಲು ಸಮಯ ನಿಗದಿ ಮಾಡಲಾಗುತ್ತಿದೆ. ಸಂಜೆ ಅಥವಾ ರಾತ್ರಿ ಭೇಟಿ ಯಾಗುವ ನಿರೀಕ್ಷೆ ಇದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌