New DC: ಪಿ. ಸುನೀಲ ಕುಮಾರ ಬಾಗಲಕೋಟೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಬಾಗಲಕೋಟೆ: ಬಾಗಲಕೋಟೆ(Bagalakote) ನೂತನ(New) ಜಿಲ್ಲಾಧಿಕಾರಿಯಾಗಿ(Deputy Commissioner) 2011ರ ಐಎಎಸ್(IAS) ಬ್ಯಾಚಿನ(Batch) ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದ್ದಾರೆ.

ಈವರೆಗೆ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಸಿಇಓ ಟಿ. ಭೂಬಾಲನ್ ಅವರಿಂದ ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದರು.

ಬಾಗಲಕೋಟೆ ನೂತನ ಡಿಸಿ ಪಿ. ಸುನೀಲ ಕುಮಾರ

ಪಿ. ಸುನೀಲ ಕುಮಾರ ಅವರು ಮೂಲತಃ ಆಂಧ್ರ ಪ್ರದೇಶ ರಾಜ್ಯದವರಾಗಿದ್ದು, ವಾರಂಗಲ್‍ನ ನ್ಯಾಷನಲ್ ಇಸ್ಟಿಟ್ಯೂಟ್ ಆಪ್ ಟೆಕ್ನಾಲಜಿ (ಎನ್‍ಐಟಿ) ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಷಯದಲ್ಲಿ ಎಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ಅಲ್ಲದೇ, ನಂತರ 2002 ರಿಂದ 2009 ವರೆಗೆ ಟಾಟಾ ಕನ್‍ಸಲ್ಟಂಟ್ ಸಾಪ್ಟವೇರ್ ಕಂಪನಿಯ ಸಾಪ್ಟವೇರ್ ಎಂಜಿನೀಯರಾಗಿ ಎರಡು ವರ್ಷ ಭಾರತ ಮತ್ತು ಐದು ವರ್ಷ ವಿದೇಶದಲ್ಲಿ ಸೇವೆ ಸಲ್ಲಿಸಿದ್ದಾರೆ.

ವಿದೇಶ ಸೇವೆಯ ನಂತರ ಭಾರತಕ್ಕೆ ಮರಳಿದ ಅವರು ಯುಪಿಎಸ್‍ಸಿ ಪರೀಕ್ಷೆ ಬರೆದು 2011ರಲ್ಲಿ ದೇಶಕ್ಕೆ 18ನೇ ಸ್ಥಾನ ಪಡೆದು ಐಎಎಸ್ ಪಾಸು ಮಾಡಿದ್ದಾರೆ.

ನಂತರ ಹಾಸನದಲ್ಲಿ ಎರಡು ವರ್ಷ ಪ್ರೊಬೇಷನರಿ ಅವಧಿ ಮುಗಿಸಿ, ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಯಾದಗಿರಿ ಜಿಲ್ಲೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ನಾಲ್ಕು ವರ್ಷ ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆ, ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸಿ, ಕೊಪ್ಪಳ ಜಿಲ್ಲಾಧಿಕಾರಿಯಾಗಿ ಬಳಿಕ ವಿಜಯಪುರ ಜಿಲ್ಲಾಧಿಕಾರಿಯಾಗಿ ಕೂಡ ಸೇವೆ ಸಲ್ಲಿಸಿ ಈಗ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದಾರೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜಿಲ್ಲೆಯ ಅಭಿವೃದ್ದಿ ಶ್ರಮಿಸುತ್ತೇನೆ. ಮೊದಲು ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಪಿ. ಸುನೀಲ ಕುಮಾರ ತಿಳಿಸಿದರು.

Leave a Reply

ಹೊಸ ಪೋಸ್ಟ್‌