Cabinet Minister: ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ ಬಿ ಎಸ್ ವೈ ಕಡೆಗಣನೆ ಸಾಧ್ಯವಿಲ್ಲ ಸಚಿವ ಭೈರತಿ ಬಸವರಾಜ

ವಿಜಯಪುರ: ಸಚಿವ(Cabinet) ಸಂಪುಟ ವಿಸ್ತರಣೆ(Expansion) ವಿಚಾರ ಮುಖ್ಯಮಂತ್ರಿಗಳ+Chief Minister) ಪರಮಾಧಿಕಾರ(Power) ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ(Bhairati Basavaraj) ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾರನ್ನು ಸಂಪುಟಕ್ಕೆ ಸೇರಿಸಬೇಕು? ಯಾರನ್ನು ಸಂಪುಟದಿಂದ ಕೈಬಿಡಬೇಕು? ಯಾವ ದಿನಾಂಕದಂದು ಸಂಪುಟ ವಿಸ್ತರಣೆ ಮಾಡಬೇಕು ಎಂಬುದು ಎನ್ನುವ ತೀರ್ಮಾನವನ್ನು ಅವರೇ ಕೈಗೊಳ್ಳಲಿದ್ದಾರೆ. ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಅದನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆ ಎಂದು ತಿಳಿಸಿದರು.

ಪಠ್ಯ ಪುಸ್ತಕದಲ್ಲಿ ಕೇಸರಿಕರಣ ಮಾಡಲಾಗುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪಠ್ಯ ಪುಸ್ತಕದಲ್ಲಿ ಕೇಸರಿಕರಣ ಮಾಡುವ ಪ್ರಶ್ನೆಯೇ ಇಲ್ಲ. ಕೇಸರಿಕರಣ ಮತ್ತೊಂದು ಮಗದೊಂದು ಮಾಡುವ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ. ತಜ್ಞರು, ಶಿಕ್ಷಣ ತಜ್ಞರೊಂದಿಗೆ ಸಭೆ ನಡೆಸಿ ಶಿಕ್ಷಣ ಸಚಿವರು ತೀರ್ಮಾನ ಕೈಗೊಂಡಿದ್ದಾರೆ. ಸಮಾಜಕ್ಕೆ ಕೊಡುಗೆ ನೀಡಿದವರನ್ನು ಪಠ್ಯ ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿದೆ. ಯಾವ ಪಠ್ಯ ಅಳವಡಿಕೆ ಮಾಡಬೇಕು ಎನ್ನುವುದನ್ನು ತಜ್ಞರು ನಿರ್ಧರಿಸುತ್ತಾರೆ. ತಜ್ಞರ ಅಭಿಪ್ರಾಯದಂತೆ ಪಠ್ಯಪುಸ್ತಕ ರಚನೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಪಠ್ಯ ಪುಸ್ತಕದಲ್ಲಿ ಇಂಥದ್ದೇ ಕೈಬಿಟ್ಟಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ‌ಪ್ರತಿಪಕ್ಷಗಳು ಸುಮ್ಮನೆ ಮಾತನಾಡುವುದು ಅಲ್ಲ. ಕೆಲವು ಮಹಾನ್ ನಾಯಕರ ವಿಚಾರಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಕೆ ಮಾಡಲಾಗುತ್ತದೆ. ಇಲ್ಲಿ ಯಾವುದು ಕೇಸರೀಕರಣ ಇಲ್ಲ. ಮತ್ತೊಂದು ಪ್ರಸ್ತಾವನೆ ಇಲ್ಲ. ಯಾವ ಮಹಾ ನಾಯಕರು ಈ ದೇಶಕ್ಕೆ ಮತ್ತು ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಅಂಥವರನ್ನು ಸೇರಿಸಲಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಸೇರಿದಂತೆ ಇತರ ಮುಖಂಡರ ಆರೋಪಗಳಿಗೆ ಭೈರತಿ ಬಸವರಾಜ ಖಾರವಾಗಿ ಪ್ರತಿಕ್ರಿಯೆ ನೀಡಿದರು.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಮುಷ್ಕರ ಹಿಂಪಡೆಯಲು ಹಣ ಪಡೆದಿದ್ದಾರೆ ಎಂಬ ಆರೋಪದ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು

ಬಿ. ವೈ.‌ ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಈಗಾಗಲೇ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿ ನಿರಾಶರಾಗುವ ಅವಶ್ಯಕತೆ ಇಲ್ಲ. ನಮ್ಮ ವಿಜಯೇಂದ್ರ ಯುವ ನಾಯಕರಾಗಿದ್ದಾರೆ. ಅವರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಖಂಡಿತವಾಗಿ ನಮ್ಮ ಪಕ್ಷ ಉತ್ತಮ ಸ್ಥಾನ ನೀಡುತ್ತದೆ ಎಂಬ ವಿಶ್ವಾಸವಿದೆ. ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಯಡಿಯೂರಪ್ಪ ಅವರಿಗೆ ಇರುವ ಗೌರವವನ್ನು ಯಾರು ಕಡಿಮೆ ಮಾಡಲು ಸಾಧ್ಯವಿಲ್ಲ. ಅವರಲ್ಲಿರುವ ಶಕ್ತಿ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಅವರ ಸಾಮರ್ಥ್ಯ ಏನು ಎಂಬುದು ಇಡೀ ರಾಜ್ಯಕ್ಕೆ ಮತ್ತು ನಮಗೂ ಗೊತ್ತಿದೆ. ಅವರನ್ನು ನಾವು ಯಾವತ್ತೂ ಕೂಡ ತಂದೆ ಸ್ಥಾನದಲ್ಲಿ ಕಾಣುತ್ತಿದ್ದೇವೆ. ಅವರನ್ನು ಕಡೆಗಣಿಸುವ ಪ್ರಶ್ನೆಯೇ ನಮ್ಮ ಪಕ್ಷದಲ್ಲಿ ಬರುವುದಿಲ್ಲ ಬಂದಿಲ್ಲ ಬರುವುದಿಲ್ಲ ಎಂದು ಸಚಿವ ಭೈರತಿ‌ ಬಸವರಾಜ ಪ್ರತಿಕ್ರಿಯೆ ನೀಡಿದರು.

Leave a Reply

ಹೊಸ ಪೋಸ್ಟ್‌