Hospital Yadiyurappa: ಬಸವ ನಾಡಿನಲ್ಲಿ ಆರ್ ಕೆ ಎಮ್ ಆಸ್ಪತ್ರೆಯಲ್ಲಿ ನಾನಾ ಘಟಗಳನ್ನು ಉದ್ಘಾಟಿಸಿದ ಬಿ. ಎಸ್. ಯಡಿಯೂರಪ್ಪ

ವಿಜಯಪುರ: ವಿಜಯಪುರ ನಗರದಲ್ಲಿ ಆರ್ ಕೆ ಎಮ್ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಸ್ರ್ತೀ ರೋಗ ಮತ್ತು ಪ್ರಸೂತಿ ವಿಭಾಗದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ಚಿಕ್ಕ ಮಕ್ಕಳ ತೀವ್ರ ನಿಗಾ ಘಟಕವನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಿದರು

ಆರ್ ಕೆ ಎಮ್ ಆಸ್ಪತ್ರೆಯಲ್ಲಿ ನಾನಾ ವಿಭಾಗಗಳನ್ನು ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿ ಮಾತನಾಡಿದರು

ಬಳಿಕ ಮಾತನಾಡಿದ ಅವರು, ಆರ್ ಕೆ ಎಂ ಆಸ್ಪತ್ರೆ ಮಾಡುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.  ಈ ಭಾಗದಲ್ಲಿ ವೈದ್ಯರ ಹಾಗೂ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳ ಕೊರತೆಯನ್ನು ನೀಗಿಸುವಲ್ಲಿ ಸಂಸ್ಥೆಯ ಉತ್ತಮವಾಗಿ ಕೆಲಸ ಮಾಡುತ್ತಿದೆ.  ವಿಜಯಪುರದ ಜನತೆಗೆ ಇದು ವರದಾನವಾಗಿದೆ ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ವಿಧಾನ ಪರಿಷತ ಸದಸ್ಯ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ವಿಧಾನ ಪರಿಷತ ಸದಸ್ಯರು ಮತ್ತು ವಾಯುವ ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ, ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಹಣಮಂತ ನಿರಾಣಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಮುಖಂಡರಾದ ಸುರೇಶ ಬಿರಾದಾರ, ಸಂಜೀವ ಕರ್ಪೂರಮಠ, ಆರ್ ಕೆ ಎಮ್ ಆಸ್ಪತ್ರೆಯ ಅಧ್ಯಕ್ಷ ಶಂಭುಲಿಂಗಯ್ಯ ಮ ಕರ್ಪೂರಮಠ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌