DC Visit: ಜಿಲ್ಲಾಸ್ಪತ್ರೆಗೆ ತೆರಳಿ ಅಸ್ವಸ್ಥ ಮಕ್ಕಳ ಆರೋಗ್ಯ ವಿಚಾರಿಸಿ ಡಿಸಿ- ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ

ವಿಜಯಪುರ: ಆಹಾರ ಸೇವನೆಯಿಂದ ಅಸ್ವಸ್ಥರಾಗಿ ಇಂಡಿ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂಡಿ ತಾಲೂಕಿನ ತಡವಲಗಾ ಗ್ರಾಮದ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ವಿದ್ಯಾಲಯದ ವಿದ್ಯಾರ್ಥಿಗಳ ಪೈಕಿ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

ಜಿಲ್ಲಾಸ್ಪತ್ರೆಗೆ ತೆರಳಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಐದು ಜನ ವಿದ್ಯಾರ್ಥಿನಿಯರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಆರೋಗ್ಯ ವಿಚಾರಿಸಿದರು.

ಅಲ್ಲದೇ, ಈ ವಿದ್ಯಾರ್ಥಿನಿಯರ ಆರೋಗ್ಯದ ಮೇಲೆ ತೀವ್ರ ನಿಗಾ ಇಡಬೇಕು ಎಂದು ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾದ‌ ಡಾ.ಎಲ್.ಎಸ್.ಲಕ್ಕಣ್ಣವರ ಮತ್ತು ಆಸ್ಪತ್ರೆಯ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌