Green Warriors: ಮೊದಲ‌ ಬಾರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಗಮನ ಸೆಳೆದ SPPA

ವಿಜಯಪುರ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಗ್ರೀನ್ ವಾರಿಯರ್ಸ್ ಅಂದರೆ ಅರಣ್ಯ ಇಲಾಖೆಯ ಎಲ್ಲ ಸಿಬ್ಬಂದಿಯ ಉಚಿತ ಆರೋಗ್ಯ ತಪಾಸಣೆ ಶಿಬಿರ ನಗರದ ಬಿ ಎಲ್ ಡಿ ಇ ವೈದ್ಯಕೀಯ ಆಸ್ಪತ್ರೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಎಸ್ ಪಿ ಪಿ ಎ(SPPA- Society for Protection of Plants and Animals) ಸಂಸ್ಥಾಪಕ ಅಧ್ಯಕ್ಷ ಧ್ರುವ ಪಾಟೀಲ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಕೃತಿ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ. ಅರಣ್ಯ ಮತ್ತು […]

Rajyasabga Election: ರಾಜ್ಯಸಭೆ ಚುನಾವಣೆ- ಮತದಾನ ಮಾಡಿದ ಸಿಎಂ ಬೊಮ್ಮಾಯಿ

ವಿಜಯಪುರ: ರಾಜ್ಯ ವಿಧಾನ ಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಹಕ್ಕು ಚಲಾಯಿಸಿದರು. ರಾಜ್ಯ ವಿಧಾನ ಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆ ಇದಾಗಿದೆ. ವಿಧಾನ ಸಭೆಯಲ್ಲಿರುವ ಮತಗಟ್ಟೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಹಕ್ಕು ಚಲಾಯಿಸಿದರು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕನ್ನಡ ಚಿತ್ರನಟ ಜಗ್ಹೇಶ ಮತ್ತು ಲೆಹೆರ್ ಸಿಂಗ್ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಕೇಂದ್ರ ಮಾಜಿ ಸಚಿವ […]

MEDP Training: ಸಬಲಾ ಸಂಸ್ಥೆಯಲ್ಲಿ ನಡೆದ ಬಂಜಾರಾ ಆಭರಣ ತಯಾರಿಕೆ ತರಬೇತಿ ಸಮಾರೋಪ- ಜಿ. ಪಂ. ಸಿಇಓ ರಾಹುಲ ಶಿಂಧೆ ಭಾಗಿ

ವಿಜಯಪುರ: ನಗರದ ಪ್ರತಿಷ್ಠಿತ ಸಬಲಾ ಸಂಸ್ಥೆ ಮತ್ತು ನಬಾರ್ಡ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸಣ್ಣ ಉದ್ದಿಮೆಗಳ ಯೋಜನೆ(MEDP) ಅಡಿಯಲ್ಲಿ ನಡೆದ ಬಂಜಾರಾ ಆಭರಣ ತಯಾರಿಕಾ ತರಬೇತಿ ಶಿಬಿರ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಮಾತನಾಡಿದ ಜಿ. ಪಂ. ಸಿಇಓ ರಾಹುಲ ಶಿಂಧೆ, ದೆಹಲಿಯ ದಿಲ್ಲಿಹಾತ್ ಎಂಬಲ್ಲಿ ಲಭ್ಯವಾಗುವ ಕರಕುಶಲ ವಸ್ತುಗಳು ವಿಜಯಪುರ ನಗರದ ಸಬಲಾ ಸಂಸ್ಥೆಯಲ್ಲಿ ಸಿಗುತ್ತಿವೆ.  ಈ ತರಬೇತಿಯಲ್ಲಿ ಭಾಗವಹಿಸಿದ 30 ಜನ ತರಬೇತಿದಾರರು ಇಲ್ಲಿ ಕಲಿತದ್ದನ್ನು ಸುದಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲತೆ ಸಾಧಿಸಬಹುದಾಗಿದೆ.  […]