Lokayukta Yatnal: ನೂತನ‌ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ ಅವರನ್ನು ಅಭಿನಂದಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ

ಬೆಂಗಳೂರು: ರಾಜ್ಯ ನೂತನ ಲೋಕಾಯುಕ್ತರಾಗಿ ನ್ಯಾ. ಬಿ. ಎಸ್. ಪಾಟೀಲ‌ ಪ್ರಮಾಣ ವಚನ‌ ಸ್ವೀಕರಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

ನೂತನ ಲೋಕಾಯುಕ್ತರನ್ನು ಭೇಟಿ ಮಾಡಿದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶುಭ ಕೋರಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ನಾನಾ ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ನೂಯನ ಲೋಕಾಯುಕ್ತ ಬಿ. ಎಸ್. ಪಾಟೀಲ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಶಾಸಕ ಯತ್ನಾಳ

ನ್ಯಾ. ಬಿ. ಎಸ್. ಪಾಟೀಲ‌ ಅವರು ಮೂಲತಃ ಬಸವ ನಾಡು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಪಡೇಕನೂರ ಗ್ರಾಮದವರಾಗಿದ್ದಾರೆ.  ಇದಕ್ಕೂ ಮುಂಚೆ ಉಪಲೋಕಾಯುಕ್ತ-1 ಆಗಿದ್ದ ಅವರು, ಈ ಮುಂಚೆ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

Leave a Reply

ಹೊಸ ಪೋಸ್ಟ್‌