Shivanand Patil Yatnal: ಯತ್ನಾಳ ಎಂಪಿ ಆಗುವಾಗ ನಾನೂ ಜೊತೆಯಲ್ಲಿದ್ದೆ- ಯತ್ನಾಳ ಗೆ ಶಾಸಕ ಶಿವಾನಂದ ಪಾಟೀಲ ಹಾಕಿದ ಸವಾಲೇನು ಗೊತ್ತಾ?

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ‌ ಈ ಮುಂಚೆ ಸಂಸದರಾಗುವಾಗ ನಾನೂ ಬಿಜೆಪಿಯಲ್ಲಿ ಅವರ ಜೊತೆ ಇದ್ದೆ. ಈಗ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ಅವರೂ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿ ತೋರಿಸಲಿ ಎಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಸವಾಲು ಹಾಕಿದ್ಸಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ತಮ್ಮ ಹಾಗೂ ತಮ್ಮ ಸಹೋದರನ ವಿರುದ್ಧ ಯತ್ನಾಳ ಹೆಸರು ಹೇಳದೆ ಮಾಡುತ್ತಿರುವ ಆರೊಪಗಳಿಗೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದರು. […]

Congress Protest: ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ- ಚಡಚಣದಲ್ಲಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ಕೇಂದ್ರ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ‌ ಕಾಂಗ್ರೆಸ್ ಕಾರ್ಯಕರ್ತರು ಚಡಚಣ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯಕರ್ಶಿ ಕಾಂತಾ ನಾಯಕ, ಚಡಚಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ಡಿ. ಹಕ್ಕೆ, ನಾಗಠಾಣ ಬ್ಲಾಕ್ ಅಧ್ಯಕ್ಷ ಶಹಾಜಹಾನ ಮುಲ್ಲಾಮುಂತಾದವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಕೇಂದ್ರ ಬಿಜೆಪಿ ನೇತೃತ್ವದ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಡಿ ಮೂಲಕ ಎಐಸಿಸಿ ಅಧ್ಯಕ್ಷೆ […]

Yoga Day: ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಆಡಳಿತಾಧಿಕಾರಿ ವೆಂಕಟೇಶ, ವಿಶ್ವಾದ್ಯಂತ ಇಂದು ಯೋಗ ದಿನ ಆಚರಿಸಲಾಗುತ್ತಿದೆ.  ಭಾರತದಲ್ಲಿ ಪುರಾತನ ಕಾಲದಿಂದಲೂ ಯೋಗ ಮಾಡಲಾಗುತ್ತಿದೆ.  ಜೀವನದಲ್ಲಿ ಗುರಿ ಸಾಧಿಸಲು ಯೋಗ ಪ್ರಮುಖ ಸಾಧನವಾಗಿದೆ.  ಇದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿಸಲು ಸಾಧ್ಯ.  ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಎಸ್. ಎಸ್. […]