Congress Protest: ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ- ಚಡಚಣದಲ್ಲಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ಕೇಂದ್ರ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ‌ ಕಾಂಗ್ರೆಸ್ ಕಾರ್ಯಕರ್ತರು ಚಡಚಣ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಪ್ರಧಾನ ಕಾರ್ಯಕರ್ಶಿ ಕಾಂತಾ ನಾಯಕ, ಚಡಚಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ಡಿ. ಹಕ್ಕೆ, ನಾಗಠಾಣ ಬ್ಲಾಕ್ ಅಧ್ಯಕ್ಷ ಶಹಾಜಹಾನ ಮುಲ್ಲಾಮುಂತಾದವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು.

ಚಡಚಣ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಕೇಂದ್ರ ಬಿಜೆಪಿ ನೇತೃತ್ವದ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಡಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮುಖಂಡ ರಾಹುಲ‌ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇದು ಸರಿಯಲ್ಲ ಎಂದು ಹೇಳಿದರು.

ಅಲ್ಲದೇ, ಚಡಚಣ ತಹಸೀಲ್ದಾರ ಅವರಿಗೆ ಮನವಿ ಪತ್ರಲ್ಲಿಸಿದರು.

ಈ ಸಂದರ್ಭದಲ್ಲಿ ಚಡಚಣ ಪ. ಪಂ. ಮಾಜಿ ಸದಸ್ಯ ಮೀರಾಸಾಬ ಅತ್ತಾರ ಕಾಂಗ್ರೆಸ್ ಮುಖಂಡರಾದ ಶಬ್ಬಿರ ನದಾಪ, ಮೈಬೂಬ ಸೌದಾಗರ, ಮಾಹಾದೇವ ಹಿರೇಕುರಬರ, ಪಿರಜಾದೆ, ಶೀಲವಂತ, ಅಡಕಿ, ಜಹಾಗೀರದಾರ, ಶ್ರೀಶೈಲ ಕೋಳಿ, ಮಲ್ಲು ಪೂಜಾರಿ ಸತೀಶ ಉಟಗಿ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು

Leave a Reply

ಹೊಸ ಪೋಸ್ಟ್‌