M B Patil: ಬಬಲೇಶ್ವರ ಮತಕ್ಷೇತ್ರದಲ್ಲಿ ಹೆಚ್ಚಿನ ಅನುದಾನವನ್ನು ಮಮದಾಪುರ ಗ್ರಾಮದ ನಾನಾ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ- ಎಂ. ಬಿ. ಪಾಟೀಲ

ವಿಜಯಪುರ:  ಬಬಲೇಶ್ವರ ಮತಕ್ಷೇತ್ರದಲ್ಲಿ ಹೆಚ್ಚಿನ ಅನುದಾನವನ್ನು ಮಮದಾಪುರ ಗ್ರಾಮದ ನಾನಾ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಶಾಸಕ ಎಂ. ಬಿ. ಪಾಟೀಲ ಹೇಳಿದರು. ಮಮದಾಪುರ ಗ್ರಾಮದಲ್ಲಿ ರೂ. 8.50 ಕೋ. ಅನುದಾನದಲ್ಲಿ ಮಮದಾಪುರ-ಶೇಗುಣಸಿ ರಸ್ತೆ ಸುಧಾರಣೆ ಭೂಮಿ ಪೂಜೆ ಸಲ್ಲಿಸಿ, ಜೆಜೆಎಂ ಯೋಜನೆಯಡಿ ಮನೆ-ಮನೆಗೆ ನಳದ ಮೂಲಕ ನೀರು ಸರಬರಾಜು ಮಾಡುವ ಕಾಮಗಾರಿಗೆ ಚಾಲನೆ ನೀಡಿ, ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಖರೀದಿಸಿದ ಆ್ಯಂಬುಲೇನ್ಸ್‍ ಚಾಲನೆ, ಪಶು ಆಸ್ಪತ್ರೆ ಕಟ್ಟಡ ಉದ್ಘಾಟಿಸಿ, ಮಾತನಾಡಿದ […]