Tiranga Programme: ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಲಹೆ

ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಸ್ವಾತಂತ್ರದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ  ಈ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು, ನಾಗರಿಕ ಸಂಸ್ಥೆಗಳು, ಸಾರ್ವಜನಿಕರು, ಶಾಲಾ-ಕಾಲೇಜು ಮಕ್ಕಳು, ಇತರೆ ಎಲ್ಲಾ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಕ್ರಿಯಾಶೀಲವಾಗಿ  ಭಾಗವಹಿಸುವಂತೆ ವಹಿಸಬೇಕಾದ ಕ್ರಮಗಳ ಬಗ್ಗೆ […]

Jnanayogashram Gurupurnime: ಜಿಟಿಜಿಟಿ ಮಳೆಯ ಮಧ್ಯೆಯೂ ವಿಜಯಪುರ ಜ್ಞಾನಯೋಗಾಶ್ರಮದಲ್ಲಿ ಸಂಭ್ರಮದಿಂದ ನಡೆದ ಗುರು ಪೂರ್ಣಿಮೆ ಆಚರಣೆ

ವಿಜಯಪುರ: ಕಳೆದ ಎರಡು ದಿನಗಳಿಂದ ವಿಜಯಪುರ ನಗರ ಸೇರಿದಂತೆ ಜಿಲ್ಲಾದ್ಯಂತ ಜಿಟಿಜಿಟಿ ಮಳೆಯಾಗುತ್ತಿದೆ.  ಇದರ ಮಧ್ಯೆಯೂ, ವಿಜಯಪುರ ನಗರದ ಜ್ಞಾನ ಯೋಗಾಶ್ರಮದಲ್ಲಿ ಅರ್ಥಪೂರ್ಣವಾಗಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಬೆಳಿಗ್ಗೆ ಗುರು ಸ್ಮರಣೆಯೊಂದಿಗೆ ಸಾವಿರಾರು ಭಕ್ತರು ಮತ್ತು ನಾನಾ ಸ್ವಾಮೀಜಿಗಳ ಸಮ್ಮುಖದಲ್ಲಿ ಜಪಯೋಗ ಕಾರ್ಯಕ್ರಮ ನಡೆಯಿತು.  ನಂತರ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಪ್ರವಚನ ಧ್ವನಿ ಸುರಳಿಯ ಮೂಲಕ ಆಶೀರ್ವಚನ ಕೇಳಿಸಲಾಯಿತು.  ಪ್ರವಚನದ ಆಧಾರಿತ ಆಧ್ಯಾತ್ಮಿಕ ಗ್ರಂಥಗಳ ಬಿಡುಗಡೆ ಸಮಾರಂಭ ಗಮನ ಸೆಳೆಯಿತು. ಜ್ಞಾನ ಯೋಗಾಶ್ರಮದ ಪ್ರಣವ ಮಂಟಪದಲ್ಲಿ ಮಂತ್ರದೊಂದಿಗೆ […]

DC Tahasildar Office: ಪ್ರತಿ ಮಂಗಳವಾರ ಜಿಲ್ಲೆಯ ಒಂದು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ ಕಾರ್ಯಕ್ರಮ- ವಿಜಯಪುರ ತಹಸೀಲ್ದಾರ ಕಚೇರಿಗೆ ಭೇಟಿ

ವಿಜಯಪುರ: ಪ್ರತಿ ಮಂಗಳವಾರ ಜಿಲ್ಲೆಯ ಒಂದು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ ಕಂದಾಯ ಇಲಾಖೆಯ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ವಿಜಯಪುರ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಅವರು, ಬಳಿಕ ತಹಸೀಲ್ದಾರ ಕಚೇರಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದು ಮಾರ್ಗದರ್ಶನ ಮಾಡಿದರು.  ಸರಕಾರಿ ಸೌಲಭ್ಯಗಳನ್ನು ಸುಲಭವಾಗಿ ಜನರು ಪಡೆಯುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಾರಂಭಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ […]