Statues Procession: ಬಸವ ನಾಡಿನಲ್ಲಿ ಅದ್ದೂರಿಯಾಗಿ ನಡೆದ ಸಪ್ತ ಮಹಾತ್ಮರ ಪ್ರತಿಮೆಗಳ ಮೆರವಣಿಗೆ- ಶಾಸಕ ಯತ್ನಾಳ ಭಾಗಿ

ವಿಜಯಪುರ: ಬಸವ ನಾಡು ವಿಜಯಪುರ ನಗರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಸಪ್ತ ಮಹಾತ್ಮರ ಮೂರ್ತಿಗಳ ಭವ್ಯ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.  ಪ್ರಮುಖ ರಸ್ತೆಯಾದ ಮಹಾತ್ಮಾ ಗಾಂಧಿ ರಸ್ತೆಯಲ್ಲಿ ಎಲ್ಲಿ ನೋಡಿದರೂ ಜನಸಾಗರ ಕಂಡು ಬಂದಿತು.  ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೋಂಡ ಜನರು ಅಭೂತಪೂರ್ವ ಮೆರವಣಿಗೆಗೆ ಸಾಕ್ಷಿಯಾದರು.  ಡೊಳ್ಳು ಕುಣಿತ, ಲಂಬಾಣಿ ನೃತ್ಯ ಸೇರಿದಂತೆ ನಾನಾ ಜನಪದ ಕಲಾ ತಂಡಗಳ ಸಾಂಸ್ಕೃತಿಕ ಶ್ರೀಮಂತಿಕೆಯ ಮಧ್ಯದಲ್ಲಿ ಮಹಾತ್ಮರ ಮೂರ್ತಿಗಳನ್ನು ಹೊತ್ತ ಸಾಲಂಕೃತ ವಾಹನಗಳು ಸಾಗಿದ್ದು ಗಮನ ಸೆಳೆಯಿತು.  ಈ ಕಾರ್ಯಕ್ರಮದ ರೂವಾರಿ ಮತ್ತು ವಿಜಯಪುರ […]

Journalism Award: ಡಾ. ಓಂಕಾರಗೌಡ ಕಾಕಡೆ ಸೇರಿ 10 ಜನರಿಗೆ ಅವರಿಗೆ ಎಸ್‌ಪಿಎನ್‌ಎಂಎ ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿ

ವಿಜಯಪುರ: ಬೆಂಗಳೂರಿನ ಪ್ರತಿಷ್ಛಿತ ಸೆಂಟ್ ಪೌಲ್ಸ್ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವನಹ ವಿಭಾಗ ಮಾಧ್ಯಮ ಕ್ಷೇತ್ರದಲ್ಲಿನ ಗಣನೀಯ ಸೇವೆಗಾಗಿ ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಓಂಕಾರಗೌಡ ಕಾಕಡೆ ಅವರಿಗೆ ಮಾಧ್ಯಮ ಪ್ರಶಸ್ತಿ ಘೋಷಣೆ ಮಾಡಿದೆ. ಡಾ. ಓಂಕಾರಗೌಡ ಕಾಕಡೆ ಅವರ ಜೊತೆಗೆ ಹಿರಿಯ ಪತ್ರಕರ್ತರಾದ ಡಾ. ಎ. ಎನ್. ಯಲ್ಲಪ್ಪ ರೆಡ್ಡಿ, ವಿಶ್ವೇಶ್ವರ ಭಟ್, ಡಾ. ಬಿ. ಕೆ. ರವಿ ಸೇರಿದಂತೆ 10 […]

Booster Dose: ವಿಜಯಪುರದಲ್ಲಿ ಭೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಶಾಸಕ ಯತ್ನಾಳ ಚಾಲನೆ

ವಿಜಯಪುರ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೊರೊನಾ ಭೂಸ್ಟರ್ ಡೋಸ್ ಲಸಿಕೆ ಅಭಿಯಾನಕ್ಕೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರ ನಗರದ ಕೃಷ್ಣ ಮಠದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ,ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಈಗಾಗಲೇ ದೇಶಾದ್ಯಂತ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ನಾನಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ 75 ದಿನಗಳ ವಿಶೇಷ ಕೋವಿಡ್ ಲಸಿಕಾ ಅಮೃತ ಮಹೋತ್ಸವ […]

KSAWU Music Programme: ಮಹಿಳಾ ವಿವಿಯಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಗೀತ ವಿಭಾಗ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ನಗರದ ದೃಷ್ಟಿ ಫೌಂಡೇಶನ್ ಮತ್ತು ಭಾರತ ಸಂಸ್ಕೃತಿ ಸಚಿವಾಲಯ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದಲ್ಲಿ ಧಾರವಾಡದ ಪ್ರಖ್ಯಾತ ಗಾಯಕಿ ವಿದುಷಿ ಸುಜಾತಾ ಗುರವ ಅವರು ವಿವಿಯ ಜ್ಞಾನವಾಹಿನಿ ಸ್ಟುಡಿಯೋದಲ್ಲಿ ಹಿಂದುಸ್ಥಾನಿ ಗಾಯನವನ್ನು ನಡೆಸಿಕೊಟ್ಟರು.   ಈ ಕಾರ್ಯಕ್ರಮದಲ್ಲಿ ದೃಷ್ಟಿ ಫೌಂಡೇಶನ್‌ನ ಸಂಯೋಜಕರಾದ ಡಾ.ಪಿ.ಬಿ.ಕುಲಕರ್ಣಿ ಹಾಗೂ ಮೀನಾ ಅಥಣಿ, ಧಾರವಾಡದ ಸಮಾಜ ಸೇವಕ ಗೋಪಾಲ […]

ADGP Alokkumar: ಎಡಿಜಿಪಿ ಅಲೋಕ್ ಕುಮಾರ ಜು. 19 ಚಡಚಣ, ಜು. 20 ರಂದು ವಿಜಯಪುರ ಪ್ರವಾಸ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ವಿಜಯಪುರ: ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ ಅವರು ಜು. 19 ಮತ್ತು 20 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ನಾನಾ ಕಾರ್ಯಕ್ರಮಗಳಲ್ಲಿ ಪಾಲ್ಗೋಳ್ಳಲಿದ್ದಾರೆ.  ಜು. 19 ರಂದು ಸಂಜೆ 6ಕ್ಕೆ ಚಡಚಣ ಪೊಲೀಸ್ ಠಾಣೆಗೆ ಭೇಟಿ ನೀಡಲಿರುವ ಅವರು ಸಾರ್ವಜನಿಕರ ಕುಂದು ಕೊರತೆ ಆಲಿಸಿ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಜು. 20 ರಂದು ಬೆ. 8ಕ್ಕೆ ವಿಜಯಪುರ ಜಿಲ್ಲಾ ಪೊಲೀಸ್, ಕವಾಯತು ಮೈದಾನದಲ್ಲಿ ಪೊಲೀಸ್ ಕವಾಯತು ಪರಿವೀಕ್ಷಣೆ ಮಾಡಲಿದ್ದಾರೆ.  ಅಲ್ಲದೇ, ಬೆ. […]