Murder Arrest: 11 ವರ್ಷದ ಹಿಂದಿನ ಕೊಲೆ ಪ್ರಕರಣ ಭೇದಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ವಿಜಯಪುರ: ಕಳೆದ 11 ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವ ಮೂಲಕ‌ ಬಸವ ನಾಡಿನ ಪೊಲೀಸರು ಗಮನ ಸೆಳೆದಿದ್ದಾರೆ. 24.07.2011ರಲ್ಲಿ ಆಂಧ್ರಪ್ರದೇಶದ ಶ್ರೀಶೈಲಂ ಕಾಡಿನಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸರು ಭೇದಿಸಿದ್ದಾರೆ. ಅಲ್ಲದೇ, ಈ ಪ್ರಕರ, ಸಂಬಂಧ ಓರ್ವ ದೈಹಿಕ ಶಿಕ್ಷಣ ನಿರ್ದೇಶಕ ಸೇರಿ ಮೂವರನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಈ ಕೊಲೆಯಲ್ಲಿ ಮಹಿಳೆತ ಪತಿಯೇ ಶಾಮೀಲಾಗಿದ್ದು ಗಮನಾರ್ಹವಾಗಿದೆ. ಕೊಲೆಯಾದ ಪ್ರಿಯಾಂಕ ಉರ್ಫ್ ದಾನೇಶ್ವರಿ ಇವಳ ಪತಿ ಮುದ್ದೇಬಿಹಾಳ […]

Badminton Tournament: ಉದಯಶ್ರೀ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಬ್ಯಾಡ್ಮಿಂಟನ್ ಟೂರ್ನಿ- ವಿಜೇತರಿಗೆ ಬಹುಮಾನ ವಿತರಣೆ

ವಿಜಯಪುರ: ನಗರದ ಉದಯಶ್ರೀ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಯಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಕ್ರೀಡಾಪಟುಗಳಿಗಾಗಿ ಆಹ್ವಾನಿತ ಬ್ಯಾಡ್ಮಿಂಟನ್ ಟೂರ್ನಿ ನಡೆಯಿತು. ವಿಜಯಪುರ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ದಿ. ಶ್ರೀ ಪ್ರಭುದೇವ ಗಡಶೆಟ್ಟಿ ಇವರ ಸ್ಮರಣಾರ್ಥ ಈ ಟೂರ್ನಿ ಆಯೋಜಿಸಲಾಗಿತ್ತು. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ 78 ಸ್ಪರ್ಧಿಗಳು ಇದರಲ್ಲಿ ಪಾಲ್ಗೊಂಡರು. ‌ ವಿಜಯಪುರ‌ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಅಧ್ಯಕ್ಷ ವೀರೇಂದ್ರ ಪಾಟೀಲ ಪಂದ್ಯಾವಳಿ ಉದ್ಘಾಟಿಸಿದರು. ಈ ಟೂರ್ನಾಮೆಂಟಿನಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ‌ ಮತ್ತು ಪ್ರಶಸ್ತಿ […]

Yogathon: ಯೋಗಾಥಾನ್-2022 ಕಾರ್ಯಕ್ರಮಕ್ಕೆ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ

ವಿಜಯಪುರ: ರಾಜ್ಯ ಹಾಗೂ ಕೇಂದ್ರ ಸರಕಾರಗಳ ಮಹತ್ವದ ಕಾರ್ಯಕ್ರಮ ಯೋಗಾಥಾನ್-2022ಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನಗರದಲ್ಲಿ ಚಾಲನೆ ನೀಡಿದರು. ನಗರದ ಡಾ. ಬಿ. ಎನ್. ಎಂ ಆಯುರ್ವೇದ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಯೋಗವು ನಮ್ಮ ದೇಶದ ಪರಂಪರೆ, ಸಂಸ್ಕೃತಿ ಮತ್ತು ಹಿರಿಮೆಯಾಗಿದೆ. ಪುರಾತನ ಕಾಲದಿಂದಲೂ ಯೋಗ ಪದ್ಧತಿಯನ್ನು ಅಳವಡಿಸಿಕೊಂಡು ಬಂದಿದ್ದೇವೆ. ಯೋಗ ಮಾಡುತ್ತಿದ್ದ ಋಷಿಮುನಿಗಳು ಶತಾಯುಷಿಗಳಾಗಿ ಬದುಕಿ ನಮಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗವನ್ನು ಹೆಚ್ಚು […]

Anganawadi Conference: ಅಂಗನವಾಡಿ ನೌಕರರ ಸಂಘದ 4ನೇ ಜಿಲ್ಲಾ ಸಮ್ಮೇಳನ‌ ಯಶಸ್ವಿ

ವಿಜಯಪುರ: ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ಸಂಯೋಜಿತ ವಿಜಯಪುರ ಜಿಲ್ಲಾ ಸಮಿತಿಯ 4ನೇ ಸಮ್ಮೇಳನವು ವಿಜಯಪುರದಲ್ಲಿ ಯಶಸ್ವಿಯಾಗಿ ನಡೆಯಿತು. ಜಲನಗರದಲ್ಲಿರು ಶಿವಶರಣೆ ನಿಂಬೆಕ್ಕಾ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದಾ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಂಗನವಾಡಿ ನೌಕರರ ಸೇವೆಯನ್ನು ಖಾಯಂ ಮಾಡಬೇಕು. ಅಲ್ಲಿಯವರೆಗೆ ಕನಿಷ್ಠ ವೇತನ ಜಾರಿಗೆ ಮಾಡಬೇಕು. ಅಂಗನವಾಡಿ ನೌಕರರಿಗೆ ಗ್ರಾಚ್ಯೂಟಿ ನೀಡಬೇಕು. ಆದರೆ, ಎರಡೂ ಸತಕಾರಗಳು ಅಂಗನವಾಡಿ ನೌಕರರಿಗೆ ತಾರತಮ್ಯ ಮಾಡುತ್ತಿವೆ. ಆದ್ದರಿಂದ ಸುಪ್ರೀಂ […]

Money Siddheshwar Swamiji: ಹಣವನ್ನು ಪ್ರೀತಿಸಿ ಆದರೆ ದುರುಪಯೋಗ ಪಡಿಸಿಕೊಳ್ಳಬೇಡಿ- ಶ್ರೀ ಸಿದ್ದೇಶ್ವರ ಸ್ವಾಮೀಜಿ

ವಿಜಯಪುರ: ಹಣವನ್ನು ಪ್ರೀತಿಸಿ. ಆದರೆ, ದುರುಪಯೋಗ ಪಡಿಸಿಕೊಳ್ಳಬೇಡಿ ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಶ್ರೀ ಪರಮಾನಂದ ಪತ್ತಿನ ಸಹಕಾರಿ ಸಂಘದ 5ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.   ಪ್ರತಿಯೊಂದು ಕುಟುಂಬವೂ ಸಹಿತ ಸಹಕಾರಿ ಸಂಘಗಳಿದ್ದಂತೆ. ತಂದೆ, ತಾಯಿ, ಮಕ್ಕಳು ಸೇರಿದಂತೆ ಸಂಘವನ್ನು ಮುನ್ನಡೆಸಿದಂತೆ ಸಹಕಾರಿ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷ ಸದಸ್ಯರುಗಳು ತಮ್ಮ ಕುಟುಂಬದಂತೆ ಪತ್ತಿನ ಸಹಕಾರಿ ಸಂಘವನ್ನು ನಿರ್ವಹಿಸಬೇಕು. ಒಳ್ಳೆಯ ಮಾತುಗಳು ಕುಟುಂಬದ ಜೀವಾಳವಿದ್ದಂತೆ. […]

DC Gram Vastavya: ಯಶಸ್ವಿಯಾದ ವಿಜಯಪುರ ಡಿಸಿ ಗ್ರಾಮ ವಾಸ್ತವ್ಯ

ವಿಜಯಪುರ: ಜಿಲ್ಲಾಧಿಕಾರಿಗಳಾದ ಡಾ.‌ ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಚಡಚಣ ತಾಲೂಕಿನ ಜಿಗಜೇವಣಗಿಯಲ್ಲಿ ಕೈಗೊಂಡ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಸಾರ್ವಜನಿಕರ ಸಹಭಾಗೀತ್ವದ ಮೂಲಕ ಯಶಸ್ವಿಯಾಯಿತು. ಗ್ರಾಮದ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕರಾದ ಡಾ.ದೇವಾನಂದ ಫೂ.ಚವ್ಹಾಣ್ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳು, ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಸಾರ್ವಜನಿಕರ ಅಹವಾಲು ಆಲಿಸಿದರು. ಚಡಚಣ ತಹಸೀಲ್ದಾರ ಹನುಮಂತ ಎನ್.ಶಿರಹಟ್ಟಿ ಅವರು ಸಾರ್ವಜನಿಕರ ಅರ್ಜಿಗಳನ್ನು ಓದಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಅರ್ಜಿಗಳ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ […]