BLDEA Rameshkumar: ಬಿ ಎಲ್ ಡಿ ಇ ಸಂಸ್ಥೆಯ ಕಟ್ಟಿ ಬೆಳೆಸಿದ ಮಹನೀಯರ ಸ್ಮರಣೆ- ಜು. 27 ರಂದು ನಡೆಯುವ ಕಾರ್ಯಕ್ರಮದಲ್ಲಿ ರಮೇಶಕುಮಾರ ಭಾಗಿ

ವಿಜಯಪುರ: ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಬಿ.ಎಲ್.ಡಿ.ಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಪೂಜ್ಯ ಡಾ.ಫ.ಗುಹಳಕಟ್ಟಿ, ಬಂಥನಾಳ ಶಿವಯೋಗಿಗಳ, ಮಹಾದಾನಿ ಬಂಗಾರಮ್ಮ ಸಜ್ಜನ, ಶಿಕ್ಷಣ ಪ್ರೇಮಿ ದಿ. ಬಿ. ಎಂ. ಪಾಟೀಲ ಅವರ ಸ್ಮರಣೆ ಅಂಗವಾಗಿ ವರ್ತಮಾನದ ಬದುಕು ಎಂಬ ವಿಷಯದ ಕುರಿತು ಕರ್ನಾಟಕ ವಿಧಾನಸಭೆ ಮಾಜಿ ಅಧ್ಯಕ್ಷ, ಶಾಸಕ ಕೆ.ಆರ್.ರಮೇಶಕುಮಾರ ಅವರು ಮಾತನಾಡಲಿದ್ದಾರೆ.

ದಿ.27 ಬುಧವಾರ ಬೆ.11ಗಂ. ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಗ್ರಂಥಾಲಯ ಸಭಾಂಗಣದಲ್ಲಿ ಧಾರವಾಡ ಮುರುಘಾಮಠ ಹಾಗೂ ಬೆಂಗಳೂರು ಸರ್ಪಭೂಷಣ ಶಿವಯೋಗಿಗಳ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ದಿವ್ಯ ಸಾನಿಧ್ಯದಲ್ಲಿ, ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ, ಶಾಸಕ ಎಂ. ಬಿ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

ಬಿ ಎಲ್ ಡಿ ಇ ಸಂಸ್ಥೆ ಕಟ್ಟಿ ಬೆಳೆಸಿದ ಮಹನೀಯರು

ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಚಿಂತನ-ಸಾಂಸ್ಕೃತಿಕ ಬಳಗ ಕಾರ್ಯದರ್ಶಿ ಡಾ. ಮಹಾಂತೇಶ ಬಿರಾದಾರ ವಿನಂತಿಸಿದ್ದಾರೆ.

Leave a Reply

ಹೊಸ ಪೋಸ್ಟ್‌