Har Ghar Tiranga: ವಿಜಯಪುರ ನಗರದಲ್ಲಿ ಧ್ವಜಗಳ ಮಾರಾಟ ಕೇಂದ್ರಕ್ಕೆ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ

ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನ ಹಿನ್ನೆಲೆಯಲ್ಲಿ ವಿಜಯಪುರ ನಗರದ ಮನೆಮನೆಗಳಿಗೆ ರಾಷ್ಟ್ರಧ್ವಜಗಳನ್ನು ತಲುಪಿಸುವ ಉದ್ದೇಶದಿಂದ ವಿಜಯಪುರ ಮಹಾನಗರ ಪಾಲಿಕೆಯಿಂದ ಧ್ವಜ ಮಾರಾಟ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ ನೀಡಿದರು.  ನಗರದ ಗಾಂಧಿಚೌಕ್ ಬಳಿ ಇರುವ ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣ ಮಳಿಗೆಗಳ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಟೋ ಚಾಲಕರಿಗೆ, ವ್ಯಾಪಾರಸ್ಥರಿಗೆ, ವಿತರಕರಿಗೆ, ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ರಾಷ್ಟ್ರಧ್ವಜಗಳನ್ನು ನೀಡಿದರು.  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ […]

Kasapa Joshi: ಕಸಾಪ ರಾಜ್ಯಾಧ್ಯಕ್ಷ ನಾ. ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವ ದರ್ಜೆಗೆ ಸಮನಾದ ಸ್ಥಾನಮಾನ- ಹಾಸಿಂಪೀರ ವಾಲಿಕಾರ ಅಭಿನಂದನೆ

ಬೆಂಗಳೂರು:  ಕನ್ನಡ ಸಾಹಿತ್ಯ ಪರಿಷತ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನ ನೀಡಿ ಸರಕಾರ ಆದೇಶ ನೀಡಿದೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತ ಸರಕಾರ ಈ ಆದೇಶ ಹೊರಡಿಸಿದೆ. ಹಾಸಿಂಪೀರ ವಾಲಿಕಾರ ಅಭಿನಂದನೆ ಕನ್ನಡ ಸಾಹಿತ್ಯ ಪರಿಷತ ರಾಜ್ಯಾಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಿ ಸರಕಾರ ಗೌರವಿಸಿರುವುದಕ್ಕೆ ಕನ್ನಡ ಸಾಹಿತ್ಯ ಪರಿಷತ ವಿಜಯಪುರ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿನಂದನೆ ಸಲ್ಲಿಸಿದ್ದಾರೆ.  

Fellowship Award: ಚರ್ಮರೋಗ ಖ್ಯಾತ ವೈದ್ಯ ಡಾ. ಅರುಣ ಇನಾಮದಾರ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಫೆಲೋಶಿಪ್ ಪ್ರದಾನ

ವಿಜಯಪುರ: ನಗರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಉಪಕುಲಪತಿ ಡಾ. ಅರುಣ ಇನಾಮದಾರ ಅವರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಆವಿಷ್ಕಾರ ಮತ್ತು ಕೋಡುಗೆಗಳನ್ನು ಪರಿಗಣಿಸಿ ಪ್ರತಿ ವರ್ಷ ರಾಜ್ಯದ ನಾನಾ ಕ್ಷೇತ್ರಗಳ ಗಣ್ಯ ವಿಜ್ಞಾನಿಗಳಿಗೆ ಕೊಡ ಮಾಡುವ ಪ್ರಶಸ್ತಿ ಇದಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 2022ನೇ ವರ್ಷದ ಪ್ರಶಸ್ತಿಯ‌ನ್ನು ಚರ್ಮರೋಗ ಖ್ಯಾತ ವೈದ್ಯರೂ ಆಗಿರುವ ಡಾ. ಅರುಣ ಇನಾಮದಾರ ಅವರಿಗೆ ಪ್ರದಾನ […]

Accreditation Committee: ವಿಜಯಪುರದ ಮೋಹನ ಕುಲಕರ್ಣಿ ಸೇರಿ 12 ಪತ್ರಕರ್ತರನ್ನು ಸೇರಿಸಿ ಮಾಧ್ಯಮ ಮಾನ್ಯತಾ ಸಮಿತಿ ರಚಿಸಿದ ಸರಕಾರ

ಬೆಂಗಳೂರು: ವಿಜಯಪುರದ ಸತ್ಯಕ್ರಾಂತಿ ದಿನಪತ್ರಿಕೆ ಸಂಪಾದಕ ಮತ್ತು ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಸಂಪಾದಕರ ಸಂಘದ ಮುಖಂಡ ಹಾಗೂ ಹಿರಿಯ ಪತ್ರಕರ್ತ ಮೋಹನ ಕುಲಕರ್ಣಿ ಸೇರಿದಂತೆ 12 ಜನರನ್ನು ಮಾಧ್ಯಮ ಮಾನ್ಯತಾ ಸಮಿತಿ ಪದಾಧಿಕಾರಿಗಳಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.  ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮುಖ್ಯಸ್ಥರು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.  ಉಳಿದಂತೆ ಹನುಮಂತರಾವ ಬೈರಾಮಡಗಿ, ಉದಯವಾಣಿ ಹಿರಿಯ ವರದಿಗಾರ(ಕಲಬುರಗಿ), ರುದ್ರಣ್ಣ ಹರ್ತಿಕೋಟಿ, ಸುದ್ದಿ ವಿಭಾಗದ ಮುಖ್ಯಸ್ಥರು, ವಿಜಯವಾಣಿ(ಬೆಂಗಳೂರು), ಮೋಹನ ಕುಲಕರ್ಣ, ಸಂಪಾದಕರು, […]

Rain Fall: ತಾಳಿಕೋಟೆಯಲ್ಲಿ 46 ಮಿಮಿ, ವಿಜಯಪುರದಲ್ಲಿ 38 ಮಿಮಿ ಮಳೆ, ಒಟ್ಟು 15 ಮನೆಗಳಿಗೆ ಹಾನಿ

ವಿಜಯಪುರ: ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆ ಮುಂದುವರೆದಿದೆ. ಬಸವ ನಾಡಿನ ಬಹುತೇಕ ಕಡೆ ಈಗಲೂ ಭಾರಿ‌ ಮೋಡ ಮುಸುಕಿದ ವಾತಾವರಣವಿದ್ದು, ಆಗಾಗ ಮಳೆಯಾಗುತ್ತಿದೆ. ಹಲವೆಡೆ ಉತ್ತಮ ಮಳೆಯಾಗಿದ್ದರೆ, ಕೆಲವೆಡೆ ಭಾರಿ ಮತ್ತೆ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ನಾನಾ ಕಡೆ ಸುರಿದ ಮಳೆಯ ವಿವರ ಇಲ್ಲಿದೆ. ವಿಜಯಪುರ ತಾಲೂಕು ವಿಜಯಪುರ ನಗರ- 38.60 ಮಿಮಿ ನಾಗಠಾಣ- 00 ಮಿಮಿ ಭೂತ್ನಾಳ- 14.40 ಮಿಮಿ ಹಿಟ್ನಳ್ಳಿ- 21.20 ಮಿಮಿ ಕುಮಟಗಿ- 11.20 […]