Har Ghar Tiranga: ವಿಜಯಪುರ ನಗರದಲ್ಲಿ ಧ್ವಜಗಳ ಮಾರಾಟ ಕೇಂದ್ರಕ್ಕೆ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ

ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನ ಹಿನ್ನೆಲೆಯಲ್ಲಿ ವಿಜಯಪುರ ನಗರದ ಮನೆಮನೆಗಳಿಗೆ ರಾಷ್ಟ್ರಧ್ವಜಗಳನ್ನು ತಲುಪಿಸುವ ಉದ್ದೇಶದಿಂದ ವಿಜಯಪುರ ಮಹಾನಗರ ಪಾಲಿಕೆಯಿಂದ ಧ್ವಜ ಮಾರಾಟ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ ನೀಡಿದರು. 

ಹರ್ ಘರ್ ತಿರಂಗಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರಧ್ವಜ ಮಾರಾಟ ಮಳಿಗೆಗೆ ಚಾಲನೆ ನೀಡಿದರು

ನಗರದ ಗಾಂಧಿಚೌಕ್ ಬಳಿ ಇರುವ ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣ ಮಳಿಗೆಗಳ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಟೋ ಚಾಲಕರಿಗೆ, ವ್ಯಾಪಾರಸ್ಥರಿಗೆ, ವಿತರಕರಿಗೆ, ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ರಾಷ್ಟ್ರಧ್ವಜಗಳನ್ನು ನೀಡಿದರು.  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ದೇಶಾದ್ಯಂತ ನಾನಾ ಕಾರ್ಯಕ್ರಮಗಳು ನಡೆಯುತ್ತಿವೆ.  ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ಕೂಡ ನಡೆಯುತ್ತಿದೆ.  ಆ. 13ರಿಂದ ಆ. 15ರ ವರೆಗೆ ಮನೆಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಧ್ವಜದೊಂದಿಗಿನ ಬಾಂಧ್ಯವ್ಯವನ್ನು ಗಟ್ಟಿಗೊಳಿಸಬೇಕು ಎಂದು ಜಿಲ್ಲೆಯ ಸಾರ್ವಜನಿಕರಲ್ಲಿ ಈ ಸಂದರ್ಭದಲ್ಲಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಮತ್ತೀತರರು ಉಪಸ್ಥಿತರಿದ್ದರು.

 

 

 

Leave a Reply

ಹೊಸ ಪೋಸ್ಟ್‌