BJP Appointment: ಬಿಜೆಪಿ ಜಿಲ್ಲಾ ವಕ್ತಾರರಾಗಿ ಸುರೇಶ ಬಿರಾದಾರ, ಜಿಲ್ಲಾ ಉಪಾಧ್ಯಕ್ಷರಾಗಿ ರಾಜಶೇಖರ ಪೂಜಾರ ನೇಮಕ

ವಿಜಯಪುರ: ವಿಜಯಪುರ ಜಿಲ್ಲಾ ಬಿಜೆಪಿ ವಕ್ತಾರರನ್ನಾಗಿ ಹಿರಿಯ ಮುಖಂಡ ಸುರೇಶ ಬಿರಾದಾರ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ನೇಮಕ ಮಾಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸುರೇಶ ಬಿರಾದಾರ ಅವರಿಗೆ ಜಿಲ್ಲಾ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯಪುರ ಬಿಜೆಪಿ ಜಿಲ್ಲಾ ನೂತನ ವಕ್ತಾರ ಸುರೇಶ ಬಿರಾದಾರ

ರಾಜಶೇಖರ ಪೂಜಾರ ನೇಮಕ

ಈ ಮಧ್ಯೆ, ರಾಜಶೇಖರ ಪೂಜಾರ ಅವರನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಆರ್. ಎಸ್. ಪಾಟೀಲ ಕೂಚಬಾಳ ಮಾಹಿತಿ ನೀಡಿದ್ದಾರೆ.

ವಿಜಯಪುರ ಬಿಜೆಪಿ ಜಿಲ್ಲಾ ನೂತನ ಉಪಾಧ್ಯಕ್ಷ ರಾಜಶೇಖರ ಪೂಜಾರಿ

ಉಭಯ ನಾಯಕರು ತಮಗೆ ಜಿಲ್ಲಾಧ್ಯಕ್ಷರು ನೀಡಿರುವ ಹೊಸ ಜವಾಬ್ದಾರಿಗೆ ಸಂತಸ ವ್ಯಕ್ತಪಡಿಸಿದ್ದು, ಬಸವ ನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದ್ದಾರೆ.

 

Leave a Reply

ಹೊಸ ಪೋಸ್ಟ್‌