Flood Katti: ದೋಣಿ ನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ

ವಿಜಯಪುರ: ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಟಿಯಿಂದಾದ ಹಾನಿಯನ್ನು ಖುದ್ದು ಪರಿಶೀಲಿಸಿದರು. ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸುನೀಲಗೌಡ ಬಿ.ಪಾಟೀಲ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷರಾದ ವಿಜುಗೌಡ ಎಸ್. ಪಾಟೀಲ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಎಸ್ಪಿ ಎಚ್. ಡಿ. ಆನಂದಕುಮಾರ, ಆಹಾರ ಇಲಾಖೆ, ತೋಟಗಾರಿಕಾ ಇಲಾಖೆ […]

CM Katti: ಸಿಎಂ, ಗೃಹ ಸಚಿವರ ಬದಲಾವಣೆ ಮಾಧ್ಯಮಗಳ ಸೃಷ್ಠಿ- ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆಗೆ ಹೋಗ್ತೇವೆ- ಸಚಿವ ಉಮೇಶ ಕತ್ತಿ

ವಿಜಯಪುರ: ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಬದಲಾವಣೆ ಮಾಧ್ಯಮಗಳ ಸೃಷ್ಠಿ.  ಆ. 15 ರಂದು ಬಸವರಾಜ ಬೊಮ್ಮಾಯಿ ಅವರೇ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹರನಾಳ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿಯೇ ಎದುರಿಸುವ ಕಾರ್ಯಕ್ರಮವನ್ನು ಬಿಜೆಪಿ ಹೊಂದಿದೆ ಎಂದು ತಿಳಿಸಿದರು. ಬಿಜೆಪಿ ಇಮೆಜ್ ಗೆ ಧಕ್ಕೆ ವಿಚಾರ ಬಿಜೆಪಿ ಮುಖಂಡ  ಪ್ರವೀಣ ನೆಟ್ಟಾರ್ ಹತ್ಯೆ […]

Nalatwad Moharrum: ಬಸವ ನಾಡಿನ ವೈಶಿಷ್ಠ್ಯ- ಅಗ್ನಿಯಲ್ಲಿ ಹಾಯ್ದು ಮೊಹಂ ಉತ್ಸವದಲ್ಲಿ ಪಾಲ್ಗೋಂಡ ಬಾಂಧವರು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆ ತರಹೇವಾರಿ ಜಾತ್ರೆ, ಸಂಪ್ರದಾಯ, ಆಚರಣೆ, ಕೋಮು ಸೌಹಾರ್ದತೆಗೆ ಹೆಸರುವಾಸಿ.  ರಾಜ್ಯ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಈ ಜಿಲ್ಲೆಯಲ್ಲಿ ಹಬ್ಬಗಳು, ಆಚರಣೆಗಳು, ಜಾತ್ರೆಗಳು, ಉತ್ಸವಗಳು ಅತೀ ಹೆಚ್ಚು.  ಪ್ರತಿ ದಿನವೂ ಒಂದಿಲ್ಲೊಂದು ಗ್ರಾಮಗಳಲ್ಲಿ ಜಾತ್ರೆ, ಉತ್ಸವ, ಹಬ್ಬಗಳು, ಕಾರ್ಯಕ್ರಮಗಳ ನಡೆದೇ ಇರುತ್ತವೆ.  ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಸಾರ್ಜಜನಿಕವಾಗಿ ಆಚರಿಸಲಾಗುವು ಜಾತ್ರೆಗಳು, ಹಬ್ಬ, ಹರಿದಿನಗಳು, ಉತ್ಸವಗಳಿಗೆ ಮಂಕು ಕವಿದಿತ್ತು.  ಆದರೆ, ಈ ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿದ್ದ ಆತಂಕ ಬಹುತೇಕ ಕಡಿಮೆಯಾಗಿರುವ […]

Gold Cash Car Theft: ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆ

ವಿಜಯಪುರ ಗುಮ್ಮಟನಗರಿ ವಿಜಯಪುರದಲ್ಲಿ ಕಳ್ಳರು ಖತರ್ನಾಕ್ ಕಳ್ಳತನ ನಡೆಸಿದ್ದಾರೆ. ಕೇವಲ ನಗನಾಣ್ಯ ದೋಚಿದ್ದಷ್ಟೇ ಅಲ್ಲದೆ ಕಾರನ್ನೂ ಕೂಡ ಕದ್ದು ಪರಾರಿಯಾಗಿದ್ದಾರೆ. ವಿಜಯಪುರ ನಗರದ ಮಲ್ಲಿಕಾರ್ಜುನ ನಗರದಲ್ಲಿ ಹಾಗೂ ಶ್ರೀನಗರದಲ್ಲಿ ಎರಡು ಮನೆಗಳಲ್ಲಿ ಕಳ್ಳತನ ನಡೆದಿದೆ. ನಸುಕಿನ ಜಾವ ಮನೆಗೆ ನುಗ್ಗಿರುವ ಕಳ್ಳರು ತಮ್ಮ ಕೈಚಳಕ ತೋರಿಸಿ ಪರಾರಿಯಾಗಿದ್ದಾರೆ. ಮೊದಲ ಘಟನೆಯಲ್ಲಿ ವಿಜಯಪುರ ನಗರದ ಮಲ್ಲಿಕಾರ್ಜುನ ನಗರದಲ್ಲಿರುವ ಎಂಜಿನಿಯರ್ ಮಲ್ಲನಗೌಡ ಬಿರಾದಾರ ಎಂಬುವರ ಮನೆಯಲ್ಲಿ ಬಾರಿ ಕಳ್ಳತನ ನಡೆಸಿದ್ದಾರೆ. ಇವರ ಮನೆಯಲ್ಲಿ ಅವರ ಪತ್ನಿ ಗೀತಾ ಬಿರಾದಾರ ಮಾತ್ರ […]