CM Katti: ಸಿಎಂ, ಗೃಹ ಸಚಿವರ ಬದಲಾವಣೆ ಮಾಧ್ಯಮಗಳ ಸೃಷ್ಠಿ- ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆಗೆ ಹೋಗ್ತೇವೆ- ಸಚಿವ ಉಮೇಶ ಕತ್ತಿ

ವಿಜಯಪುರ: ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಬದಲಾವಣೆ ಮಾಧ್ಯಮಗಳ ಸೃಷ್ಠಿ.  ಆ. 15 ರಂದು ಬಸವರಾಜ ಬೊಮ್ಮಾಯಿ ಅವರೇ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಸಚಿವ ಉಮೇಶ ಕತ್ತಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹರನಾಳ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿಯೇ ಎದುರಿಸುವ ಕಾರ್ಯಕ್ರಮವನ್ನು ಬಿಜೆಪಿ ಹೊಂದಿದೆ ಎಂದು ತಿಳಿಸಿದರು.

ಬಿಜೆಪಿ ಇಮೆಜ್ ಗೆ ಧಕ್ಕೆ ವಿಚಾರ

ಬಿಜೆಪಿ ಮುಖಂಡ  ಪ್ರವೀಣ ನೆಟ್ಟಾರ್ ಹತ್ಯೆ ಬಳಿಕ ಬಿಜೆಪಿ ಇಮೇಜ್ ಗೆ ಧಕ್ಕೆಯಾಗಿದೆ ಎಂಬ ವಿಚಾರದ ಕುರಿತು ಮಾತನಾಡಿದ ಅವರು, ಇದರಿಂದ ಸರಕಾರದ ಇಮೇಜ್ ಗೆ ಯಾವುದೇ ಧಕ್ಕೆಯಿಲ್ಲ.  ಮುಂದಿನ ಚುನಾವಣೆಯ ಫಲಿತಾಂಶ ಬಂದ ಮೇಲೆ ಈ ಕುರಿತು ನೀವೇ ಹೇಳುವಿರಂತೆ ಎಂದು ಅವರು ಹೇಳಿದರು.

Leave a Reply

ಹೊಸ ಪೋಸ್ಟ್‌